Breaking News

ಖಾಸಗಿ ಸಂಸ್ಥೆಗಳಿಗೆ ಗೋಮಾಳ? ಹೊಸ ನೀತಿ ರೂಪಿಸಲು ಮುಂದಾದ ರಾಜ್ಯ ಸರಕಾರ

Spread the love

ಬೆಂಗಳೂರು: ಗೋಮಾಳ ಸಹಿತ ವಿವಿಧ ಬಗೆಯ ಸರಕಾರಿ ಜಮೀನುಗಳನ್ನು ಖಾಸಗಿ ಸಂಘ-ಸಂಸ್ಥೆಗಳಿಗೆ ಮಂಜೂರು ಮಾಡಲು ನೀತಿಯೊಂದನ್ನು ತರಲು ರಾಜ್ಯ ಸರಕಾರ ಮುಂದಾಗಿದ್ದು, ಅದಕ್ಕಾಗಿ ಸಚಿವ ಸಂಪುಟದ ಉಪ ಸಮಿತಿ ರಚಿಸಿದೆ.

ಗೋಮಾಳ, ಗಾಯರಾಣ, ಹುಲ್ಲುಬನ್ನಿ, ಸೊಪ್ಪಿನಬೆಟ್ಟ ಇತ್ಯಾದಿ ಗ್ರಾಮೀಣ ಸರಕಾರಿ ಜಮೀನುಗಳನ್ನು ಖಾಸಗಿ ಸಂಘ-ಸಂಸ್ಥೆಗಳಿಗೆ ಮಂಜೂರು ಮಾಡುವ ನೀತಿ ರೂಪಿಸಬೇಕಾಗಿದೆ.

 

ಗೋಮಾಳ, ಗಾಯರಾಣ, ಹುಲ್ಲುಬನ್ನಿ, ಸೊಪ್ಪಿನಬೆಟ್ಟ ಇತ್ಯಾದಿ ಗ್ರಾಮೀಣ ಸರಕಾರಿ ಜಮೀನುಗಳನ್ನು ಖಾಸಗಿ ಸಂಘ-ಸಂಸ್ಥೆಗಳಿಗೆ ಮಂಜೂರು ಮಾಡುವ ನೀತಿ ರೂಪಿಸಬೇಕಾಗಿದೆ. ಇದಕ್ಕಾಗಿ ಕಂದಾಯ ಸಚಿವ ಆರ್‌. ಅಶೋಕ್‌ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚಿಸಲಾಗಿದೆ.

ಸಮಿತಿಯಲ್ಲಿ ಕಾನೂನು ಸಚಿವರಾದ ಜೆ.ಸಿ. ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಪ್ರಭು ಚೌಹಾಣ್‌, ಬಿ.ಸಿ. ಪಾಟೀಲ್‌, ಭೈರತಿ ಬಸವರಾಜ ಸದಸ್ಯರಾಗಿದ್ದಾರೆ. ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಿ ಸರಕಾರದ ಜಂಟಿ ಕಾರ್ಯದರ್ಶಿ ಜ. 29ರಂದು ಆದೇಶ ಹೊರಡಿಸಿದ್ದಾರೆ.

ಖಾಸಗಿ ಸಂಘ-ಸಂಸ್ಥೆಗಳಿಗೆ ವಿವಿಧ ಉದ್ದೇಶಗಳಿಗೆ ಗುತ್ತಿಗೆ ಆಧಾರದಲ್ಲಿ ನೀಡಲಾಗಿರುವ ಜಮೀನುಗಳನ್ನು ಗುತ್ತಿಗೆ ಪಡೆದ ಸಂಘ-ಸಂಸ್ಥೆಗಳಿಗೆ ಖಾಯಂ ಆಗಿ ಮಂಜೂರು ಮಾಡುವ ಬಗ್ಗೆ ಸರಕಾರ 2020ರಲ್ಲಿ ಆದೇಶ ಹೊರಡಿಸಿತ್ತು.

ಈ ಮಧ್ಯೆ ಬಗರ್‌ಹುಕುಂ ರೀತಿಯಲ್ಲಿ ಸರಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿದ್ದ ವ್ಯಕ್ತಿಗಳಿಗೆ ಆ ಜಮೀನು ಮಂಜೂರು ಮಾಡುವ ವಿಷಯ ಬಾಕಿ ಉಳಿದಿದೆ. ಅಲ್ಲದೆ ಹೆಚ್ಚುವರಿ ಗೋಮಾಳ ಇದ್ದ ಕಡೆ ಅಂತಹ ಜಮೀನನ್ನು ಸಾಗುವಳಿ ಮಾಡುತ್ತಿರುವ ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡ ಬಹುದು ಎಂದು ಹೈಕೋರ್ಟ್‌ ಹೇಳಿತ್ತು. ಖಾಸಗಿ ಸಂಘ-ಸಂಸ್ಥೆಗಳಿಗೆ ಗೋಮಾಳ ಮತ್ತಿತರ ಸರಕಾರಿ ಜಮೀನು ಮಂಜೂರು ಮಾಡಲು ನೀತಿ ರೂಪಿಸಲು ಸರಕಾರ ಮುಂದಾಗಿ ರುವುದರಿಂದ ಖಾಸಗಿ ವ್ಯಕ್ತಿಗಳಿಗೆ ಸರಕಾರಿ ಜಮೀನು ಮಂಜೂರು ಮಾಡುವ ಬೇಡಿಕೆ ಮತ್ತೆ ಜೀವ ಪಡೆದುಕೊಳ್ಳಬಹುದು.


Spread the love

About Laxminews 24x7

Check Also

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!!

Spread the love ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!! ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ