Home / ರಾಜಕೀಯ / ಉದ್ಯಮಿಯನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ: ಬೆಳಗಾವಿಯಲ್ಲಿ 8 ಮಂದಿ ಆರೋಪಿಗಳು ಅರೆಸ್ಟ್​​ ​

ಉದ್ಯಮಿಯನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ: ಬೆಳಗಾವಿಯಲ್ಲಿ 8 ಮಂದಿ ಆರೋಪಿಗಳು ಅರೆಸ್ಟ್​​ ​

Spread the love

ಬೆಳಗಾವಿ: ಸಿನಿಮೀಯಾ ರೀತಿಯಲ್ಲಿ ಹುಬ್ಬಳ್ಳಿ ಮೂಲದ ಉದ್ಯಮಿಯೊಬ್ಬರನ್ನು ಅಪಹರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ 8 ಮಂದಿ ಆರೋಪಿಗಳನ್ನು ಬೆಳಗಾವಿ ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಕ್ರಿಪ್ಟೋ ಕರೆನ್ಸಿ ಉದ್ಯಮಿ ರವಿಕಿರಣ್ ಭಟ್ ಎಂಬುವವರನ್ನು ಆರೋಪಿಗಳು ಅಪಹರಿಸಿ, 3 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.

ಏನಿದು ಘಟನೆ?: ಯಲ್ಲಾಪುರ ಮೂಲದ ಹುಬ್ಬಳ್ಳಿ ನಿವಾಸಿ ರವಿಕಿರಣ್ ಭಟ್ ಜ.13ರಂದು ಬೆಳಗಾವಿಗೆ ಬಂದಿದ್ದರು. ಹುಬ್ಬಳ್ಳಿಯಿಂದ ಪುಣೆಗೆ ಕಾರಿನಲ್ಲಿ ತೆರಳುತ್ತಿದ್ದ ಅವರು ಜ.13ರ ತಡರಾತ್ರಿ ಬೆಳಗಾವಿ ಹೊರವಲಯದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಬಳಿಕ ಜ‌.14ರಂದು ರೆಸಾರ್ಟ್‌ನಿಂದ ಪುಣೆಯತ್ತ ಪ್ರಯಾಣ ಬೆಳೆಸಿದ್ದರು. ಈ ವೇಳೆ ರವಿಕಿರಣ್ ಅವರ ಕಾರನ್ನು ಜೆಎನ್‌ಎಂಸಿ ವೈದ್ಯಕೀಯ ಕಾಲೇಜು ಬಳಿ ತಡೆಯಲಾಗಿದೆ.

ಉದ್ಯಮಿ ಕಿಡ್ನಾಪ್ ಪ್ರಕರಣ: ಬಂಧಿತ ಆರೋಪಿಗಳು

ಉದ್ಯಮಿ ಕಿಡ್ನಾಪ್ ಪ್ರಕರಣ: ಬಂಧಿತ ಆರೋಪಿಗಳು

ಬೈಕ್‌ನಲ್ಲಿ ಬಂದಿದ್ದ ಓರ್ವ ಆರೋಪಿ ಬೈಕ್‌ಗೆ ಕಾರು ಟಚ್ ಮಾಡಿ ಎಸ್ಕೇಪ್ ಆಗುತ್ತಿದ್ದೀಯಾ? ಎಂದು ವಾಗ್ವಾದ ಆರಂಭಿಸಿದ್ದಾನೆ. ಅಷ್ಟರಲ್ಲೇ ಮತ್ತೆರಡು ಬೈಕ್‌ನಲ್ಲಿ ಬಂದ ನಾಲ್ವರು ಉದ್ಯಮಿ ಜತೆ ಜಗಳ ತೆಗೆದಿದ್ದಾರೆ. ಉದ್ಯಮಿ ರವಿಕಿರಣ್ ಜತೆ ಜಗಳವಾಡುತ್ತಲೇ ಮೂವರು ಕಾರು ಹತ್ತಿದ್ದಾರೆ. ಬಳಿಕ ಹಿಂಬದಿಯಿಂದ ರಿವಾಲ್ವರ್ ತೋರಿಸಿ, ತಾವು ಹೇಳಿದ ಕಡೆ ಕಾರು ಚಾಲನೆ ಮಾಡುವಂತೆ ಬೆದರಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ