Breaking News

0 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕರೊಬ್ಬರು ಎಸಿಬಿ ಬಲೆಗೆ

Spread the love

ಬಾಗಲಕೋಟೆ: 10 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕರೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.

ನಗರಸಭೆಯ ದ್ವಿತೀಯ ದರ್ಜೆ ಸಹಾಯಕ ಸದಾಶಿವಯ್ಯ ಎಸಿಬಿ ಬಲೆಗೆ ಬಿದ್ದವರು. ಬಾಗಲಕೋಟೆ ಜಿಲ್ಲೆ ಮುಧೋಳ ನಗರಸಭೆ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಅವರು ಬಲೆಗೆ ಬಿದ್ದಿದ್ದಾರೆ.

 

ಮನೆ ಕಟ್ಟಡ ಮುಕ್ತಾಯ ಪ್ರಮಾಣಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗೀತಾ ಎಂಬುವರು ಮನೆ ಕಟ್ಟಿಸಿದ್ದು, ಪ್ರಮಾಣ ಪತ್ರ ನೀಡುವಂತೆ ಗೀತಾ ಅವರ ಪುತ್ರ ಕೋರಿದ್ದರು. ಇದಕ್ಕಾಗಿ 15,000 ರೂ. ಲಂಚಕ್ಕೆ ಎಸ್.ಡಿ.ಎ. ಸದಾಶಿವಯ್ಯ ಕತ್ತಿ ಬೇಡಿಕೆ ಇಟ್ಟಿದ್ದರು. ಈ ಮೊದಲು 5 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ್ದ ಅವರು ಇಂದು 10,000 ರೂ. ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ