Breaking News

ಕಲಬುರಗಿಯಲ್ಲಿ ಸಾಂಕ್ರಾಮಿಕ ಕೋಗಕ್ಕೆ ಬಲಿಯಾದ್ರಾ ಸಹೋದರರು!?

Spread the love

ಕಲಬುರಗಿ: ಜಿಲ್ಲೆಯಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದು, ಇದಕ್ಕೆ ಸಾಂಕ್ರಾಮಿಕ ರೋಗ ಚಿಕನ್ ಪಾಕ್ಸ್​​ ಕಾರಣ ಎಂದು ಹೇಳಲಾಗುತ್ತಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ್ ಗ್ರಾಮದಲ್ಲಿ ಸ್ಟೇಷನ್ ಬಡಾವಣೆಯ ನಿವಾಸಿಗಳಾದ ಇಮ್ರಾನ್ ಪಟೇಲ್(16) ಹಾಗೂ ರೆಹಮಾನ್‌ ಪಟೇಲ್ (14) ಸಾವಿಗೀಡಾದ ಬಾಲಕರು.

ಹಾಪೀಸಾ ಬೇಗಂ ಎಂಬುವರ ನಾಲ್ವರು ಮಕ್ಕಳಲ್ಲಿ ಚಿಕನ್ ಪಾಕ್ಸ್ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಿದೆ‌. ಇದರಿಂದ ಆತಂಕಗೊಂಡ ಬೇಗಂ ತನ್ನ ಇಬ್ಬರು ಮಕ್ಕಳನ್ನು ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಚಿಕಿತ್ಸೆ ಫಲಿಸದೆ ಮಕ್ಕಳು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಹಾಪೀಸಾ ಸೇರಿ ಇನ್ನಿಬ್ಬರು ಮಕ್ಕಳು ಸಹ ಚಿಕನ್ ಪಾಕ್ಸ್ ರೋಗದಿಂದ ಬಳಲುತ್ತಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂವರ ರಕ್ತದ ಮಾದರಿಯನ್ನು ಪಡೆದ ಆರೋಗ್ಯ ಇಲಾಖೆ ಸಿಬ್ಬಂದಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ಇದೇ ಬಡಾವಣೆಯ ಮತ್ತಿಬ್ಬರಲ್ಲಿಯೂ ಸಹ ಚಿಕನ್ ಪಾಕ್ಸ್ ರೋಗದ ಲಕ್ಷಣಗಳು ಕಂಡುಬಂದಿರುವುದಾಗಿ ವಿತ್ತಾಪುರ ಟಿ ಹೆಚ್ ಓ ಅಮರದೀಪ ತಿಳಿಸಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ