ವಿಜಯಪುರ : ಆರೋಪಿಗಳು ಯಾರೇ ಆಗಿರಲಿ, ಎಂಥವರೇ ಇರಲಿ, ಮುಂದೆ ಒಂದು ದಿನ ಅವರಿಗೆ ಶಿಕ್ಷೆ ತಪ್ಪಿದ್ದಲ್ಲ. ಅದರಲ್ಲೂ ಇಡಿಗೆ ಸಿಕ್ಕವರು ಅಷ್ಟು ಸುಲಭವಾಗಿ ಪಾರಾಗಲಾರರು. ಇಡಿ ಕೈಗೆ ಸಿಕ್ಕವರ ವಿರುದ್ಧ ಈಗಿಲ್ಲದಿದ್ರೂ ಇನ್ನು ಹತ್ತು ವರ್ಷಕ್ಕೆ ನಿಶ್ಚಿತವಾಗಿ ಕ್ರಮ ಆಗೇ ಆಗುತ್ತೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ವಿಜಯಪುರದಲ್ಲಿ ಮಾತನಾಡಿದ ಅವರು, ಮೊನ್ನೆ ಒಬ್ಬ ಬಸ್ ಕಂಡೆಕ್ಟರ್ ಸಿಕ್ಕಿದ್ದಾರೆ. ಅವರ ಮನೆಯಲ್ಲಿ ಸಾವಿರಾರು ಕೋಟಿ ಜಪ್ತಿ ಮಾಡಲಾಗಿದೆ. ಅದು ಯಾರ ದುಡ್ಡು? ಅಧಿಕಾರಿಗಳು ಅದನ್ನು ಬಹಿರಂಗಪಡಿಸಬೇಕು.
ಓರ್ವ ಬಸ್ ಕಂಡಕ್ಟರ್ ಮನೆಯಲ್ಲಿ ದಾಖಲೆ ಇಲ್ಲದೇ ಸಾವಿರಾರು ಕೋಟಿ ರೂ. ಇದೆ ಅಂದ್ರೆ ಅಂಥಹ ಕಳ್ಳರೆಲ್ಲ ಒಳಗೆ ಹೋಗಬೇಕು. ರಾಜ್ಯದ ಜನರ ಬೊಕ್ಕಸ ಲೂಟಿ ಮಾಡಿ, ದೇಶ-ವಿದೇಶದಲ್ಲಿ ಆಸ್ತಿ ಮಾಡುವ ರಾಜಕಾರಣಿಗಳಿಗೆಲ್ಲ ಶಿಕ್ಷೆ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.