Breaking News

ಪಿಸುಮಾತಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ಶಿಸ್ತು ಸಮಿತಿ ನೋಟಿಸ್‌

Spread the love

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ. ಸಿದ್ದರಾಮಯ್ಯ ಬಳಿ ಅಂದು ಪುಲಿಕೇಶಿ ನಗರದಿಂದ ಜನ ಬಂದಿರುವ ಬಗ್ಗೆ ಮಾತಾಡಿದ್ದಷ್ಟೇ. ಅದರ ಹೊರತಾಗಿ ನಾನು ಬೇರೇನೂ ಮಾತನಾಡಿಲ್ಲ.ನೋಟಿಸ್‌ಗೆ ಎರಡು ಮೂರು ದಿನದಲ್ಲಿ ಉತ್ತರಿಸುತ್ತೇನೆ ಎಂದು ಮಾಜಿ ಶಾಸಕ ಅಶೋಕ್ ಪಟ್ಟಣ್ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ನನಗೆ ನೋಟಿಸ್‌ ನೀಡಿರುವ ವಿಚಾರ ಮಾಧ್ಯಮಗಳಿಂದ ಗೊತ್ತಾಗಿದೆ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ಯುವ ಕಾಂಗ್ರೆಸ್ ಕಾಲದಿಂದಲೂ ಡಿ.ಕೆ ಶಿವಕುಮಾರ್ ನಾನು ಸ್ನೇಹಿತರು. ನನಗೆ ನೋಟಿಸ್​​ ಇನ್ನೂ ಬಂದಿಲ್ಲ. ನಾನೇನು ಅಂತಾ ತಪ್ಪು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.ಅಖಂಡ ಶ್ರೀನಿವಾಸ್ ಮೂರ್ತಿ ಹಾಗೂ ಅವರ ಹಿಂಬಾಲಕರು ಬಂದಿದ್ದರು. ಅವರು ಮಾತಾಡಿದ್ದನ್ನು ನಾನು ಹೇಳಿದೆ ಅಷ್ಟೇ. ಅದಕ್ಕೂ ನನಗೂ ಸಂಬಂಧ ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆ ಮಾಡುವ ಕೆಲಸ ಮಾಡಿಲ್ಲ. ನಾನು ಈ ಪಾರ್ಟಿಯಲ್ಲಿ 40 ವರ್ಷದಿಂದ ಇದ್ದೇನೆ. ನೋಟಿಸ್ ಕೊಡುವ ಮುನ್ನ ನನ್ನುನ್ನು ಕೇಳಿ ಕೊಡಬಹುದಿತ್ತು. ನೋಟಿಸ್ ನನ್ನ ಕೈಗೆ ಬಂದ ತಕ್ಷಣ ಉತ್ತರ ಕೊಡುತ್ತೇನೆ ಎಂದರು.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ