Breaking News

ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ ಕೇಸ್​: ಚಿಕ್ಕಮನ ಜತೆ ಅಕ್ರಮ ಸಂಬಂಧ,

Spread the love

ಕಲಬುರಗಿ: ಫೋಟೊಗ್ರಾಫರ್ ಶಿವಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಡಿ ರೈಲ್ವೆ ಪೊಲೀಸರು ಐವರು ಹಂತಕರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಹಾಂತೇಶ್ ಆಳಂದಕರ್, ಬಸವರಾಜ್ ಸಲಗಾರ್, ಫಕರಿಪ್ಪ ಸಲಗಾರ್, ಸಿದ್ದಾರೂಢ ಕೋರಬಾರ್ ಹಾಗೂ ಅಶೋಕ ಜಮಾದಾರ್​ ಎಂದು ಗುರುತಿಸಲಾಗಿದೆ.

 

ಕೊಲೆಯಾದ ಶಿವಕುಮಾರ್, ಆರೋಪಿ ಮಹಾಂತೇಶ್​ ತಾಯಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ವರಸೆಯಲ್ಲಿ ಇಬ್ಬರು ಸಹೋದರರು. ಮಹಾಂತೇಶ್​ಗೆ ಶಿವಕುಮಾರ್​ ದೊಡ್ಡಪ್ಪನ ಮಗನಾಗಬೇಕು. ಚಿಕ್ಕಮ್ಮನ ಜತೆಯಲ್ಲೇ ಅಕ್ರಮ ಸಂಬಂಧ ಹೊಂದಿದ್ದನ್ನು ಮಹಾಂತೇಶ್​ ಕಣ್ಣಾರೆ ಕಂಡಿದ್ದ.

  ಮಹಾಂತೇಶ್ ಆಳಂದಕರ್   ಬಸವರಾಜ್ ಸಲಗಾರ್ ,   ಅಶೋಕ ಜಮಾದಾರ್   ಫಕರಿಪ್ಪ ಸಲಗಾರ್   ಸಿದ್ದಾರೂಢ ಕೋರಬಾರ್ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ದೊಡ್ಡಪ್ಪನ ಮಗನ ಮೇಲೆ ಸೇಡು ತಿರಿಸಿಕೊಳ್ಳಲು ಮಾವ ಬಸವರಾಜ್ ಜತೆ ಸೇರಿಕೊಂಡು ಶಿವಕುಮಾರ್​ ಕೊಲೆಗೆ ಮಹಾಂತೇಶ್​ ಸಂಚು ರೂಪಿಸಿದ್ದ. ಜನವರಿ 25 ರಂದು ಆಳಂದ ತಾಲ್ಲೂಕಿನ ಶ್ರೀಚಂದ ಗ್ರಾಮದಿಂದ ಶಿವಕುಮಾರ್​ನನ್ನು ಬೈಕ್ ಮೇಲೆ‌ ಕರೆದುಕೊಂಡು ಬಂದಿದ್ದ ಮಹಾಂತೇಶ್, ಕೊಲೆ ಮಾಡಿ ಕಲಬುರಗಿ ಹೊರವಲಯದ ಸಾವಳಗಿ ಬಬಲಾದ್ ರೈಲ್ವೆ ಹಳಿಯ ಮೇಲೆ ಬಿಸಾಕಿ ಎಸ್ಕೇಪ್ ಆಗಿದ್ದರು.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ