Breaking News

ಬೆಂಗಳೂರಲ್ಲಿ ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕ್ಯಾನಿಕ್ ಆದ ಪೊಲೀಸ್​! ತಪ್ಪಿತು ಅನಾಹುತ, ಪೇದೆ ಕಾರ್ಯಕ್ಕೆ ಶ್ಲಾಘನೆ

Spread the love

ಬೆಂಗಳೂರು: ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕ್ಯಾನಿಕ್ ಆದ ಸಂಚಾರಿ ಪೊಲೀಸ್ ಪೇದೆಯೊಬ್ಬರ ಸ್ಟೋರಿ ಇದು. ಸರಿಯಾದ ಸಮಯಕ್ಕೆ ಈ ಪೊಲೀಸಪ್ಪ ಬಾರದಿದ್ದಲ್ಲಿ ಅನಾಹುತ ಸಂಭವಿಸುತ್ತಿತ್ತು. ಅಷ್ಟರಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ಸಿಬ್ಬಂದಿ ಕಾಸಪ್ಪ ಕಲ್ಲೂರು ಸಮಯ ಪ್ರಜ್ಞೆ ಮೆರೆದಿದ್ದು, ಇವರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರ್ತಿದೆ.

ಅಷ್ಟಕ್ಕೂ ಪೊಲೀಸ್ ಸಿಬ್ಬಂದಿ ಮಾಡಿದ ಮತಹ್ವದ​ ಕಾರ್ಯ ಎಂತಹದ್ದು ಗೊತ್ತಾ?

ಇದು ನಿನ್ನೆ(ಮಂಗಳವಾರ) ಬೆಂಗಳೂರಲ್ಲಿ ನಡೆದ ಘಟನೆ. ಗ್ಲೋಬಲ್ ಹಾಸ್ಪಿಟಲ್​ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ರೋಗಿಯೊಬ್ಬರನ್ನು ಆಂಬುಲೆನ್ಸ್​ನಲ್ಲಿ ಕುಟುಂಬಸ್ಥರು ಶಿಫ್ಟ್ ಮಾಡುತ್ತಿದ್ದರು. ರೋಗಿಯನ್ನು ಕರೆದೊಯ್ಯುವ ಮಾರ್ಗಮಧ್ಯೆ ಅಂದರೆ ವಿಧಾನಸೌಧದ ಸಿಐಡಿ ಕಚೇರಿ ಬಳಿ ಆಂಬುಲೆನ್ಸ್​ನ ​ಟಯರ್ ಪಂಚರ್ ಆಗಿಬಿಡ್ತು. ಕಂಗಾಲಾದ ರೋಗಿಯ ಪತ್ನಿ ಹಾಗೂ ಮಗಳು ಕಣ್ಣೀರಿಡುತ್ತಾ 10ಕ್ಕೂ ಹೆಚ್ಚು ಆಂಬುಲೆನ್ಸ್​ಗೆ ಕಾಲ್ ಮಾಡಿದ್ದರು. ಪೊಲೀಸ್ ಸಿಬ್ಬಂದಿ ಕರೆ ಮಾಡಿದರೂ ಸಮಯಕ್ಕೆ ಸರಿಯಾಗಿ ಯಾವುದೇ ಆಂಬುಲೆನ್ಸ್ ಸಿಗಲಿಲ್ಲ. ರೋಗಿಯ ಆಕ್ಸಿಜನ್​ ಲೆವೆಲ್​ ಕೂಡ ಕಡಿಮೆ ಆಗ್ತಿತ್ತು. ಸ್ಥಳದಲ್ಲೇ ಇದ್ದ ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿ ಕಾಸಪ್ಪ ಕಲ್ಲೂರು ಅವರಿಗೆ ಆಂಬುಲೆನ್ಸ್​ ಒಳಗಿದ್ದ ರೋಗಿ ಕ್ರಿಟಿಕಲ್​ ಕಂಡಿಷನ್​ನಲ್ಲಿದ್ದಾರೆ ಎಂಬುದು ಅರಿವಾಯ್ತು.

ಬೇರೆ ಆಂಬುಲೆನ್ಸ್​ ಬರೋದು ತಡವಾದ್ರೆ ರೋಗಿಯ ಪ್ರಾಣವೇ ಹೋಗಬಹುದು. ಇನ್ನು ತಡ ಮಾಡೋದು ಬೇಡ ಎಂದು ತಾನೇ ಮೆಕ್ಯಾನಿಕ್ ಆಗಿ ಆಂಬುಲೆನ್ಸ್​ನ ಟಯರ್ ಬದಲಿಸಿ ಆಂಬುಲೆನ್ಸ್ ಹೊರಡಲು ಅನುವು ಮಾಡಿಕೊಟ್ಟರು. ಟಯರ್​ ಬದಲಿಸಿ ಇನ್ನೇನು ಆಂಬುಲೆನ್ಸ್ ಹೊರಡಬೇಕು ಅನ್ನುವಾಗ ಮತ್ತೊಂದು ಆಂಬುಲೆನ್ಸ್ ಬಂದಿದೆ. ಆಂಬುಲೆನ್ಸ್ ಹೊರಡುವ ಸಮಯ ಮಂಗಳವಾರ ಮಧ್ಯಾಹ್ಮ 1.10ಕ್ಕೆ ಆಂಬುಲೆನ್ಸ್​ ಟೈಯರ್​ ಪಂಚರ್​ ಆಗಿತ್ತು. ಬಳಿಕ 1.55ಕ್ಕೆ ಆಂಬುಲೆನ್ಸ್​ ಹೊರಟಿದೆ. 45 ನಿಮಿಷವಾದರೂ ಬೇರೆ ಆಂಬುಲೆನ್ಸ್​ ಸಿಕ್ಕಿರಲಿಲ್ಲ. ರೋಗಿಯ ಪ್ರಾಣ ಉಳಿಸಲು ಸಮಯ ಪ್ರಜ್ಞೆ ಜತೆಗೆ ಮಾನವೀಯತೆ ಮರೆದ ಕಾಸಪ್ಪ‌ ಕಲ್ಲೂರು ಅವರ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘಿಸಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ