Breaking News

ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮುಧೋಳದ ವೈದ್ಯ: ಕೂಲಿ ಮಾಡಿ ಓದಿಸಿದ ತಂದೆಗೆ ಸನ್ಮಾನ

Spread the love

ಬಾಗಲಕೋಟೆ: ಮುಧೋಳ ತಾಲೂಕಿನ ಬೆಳಗಲಿ ಗ್ರಾಮದ ವಿದ್ಯಾರ್ಥಿ ಡಾ.ಚಿದಾನಂದ ಕುಂಬಾರ ಬೆಳಗಲಿ ನೀಟ್ ಪಿಜಿ ಪರೀಕ್ಷೆಯಲ್ಲಿ 759 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಚಿದಾನಂದ ಕುಂಬಾರ ಅವರು ಮಾಡಿದ ಈ ಸಾಧನೆಗೆ ಅವರ ತಂದೆ ಕಲ್ಲಪ್ಪ ಕುಂಬಾರಗೆ ಬೆಳಗಲಿ ಗ್ರಾಮದ ಮುಖಂಡರು ಸನ್ಮಾನಿಸಿದ್ದಾರೆ. ಈ ವೇಳೆ ಮಾತನಾಡಿದ ಕಲ್ಲಪ್ಪ ಕುಂಬಾರ, ಗ್ರಾಮೀಣ ಭಾಗದ ಯುವಕನೊಬ್ಬ ಈ ಮಟ್ಟಿಗೆ ಉನ್ನತ ಸ್ಥಾನಕ್ಕೆ ಏರಿದ್ದು, ಶ್ಲಾಘನೀಯ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಮುಧೋಳ ಶಾಸಕರು ಹಾಗೂ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಡಾ.ಚಿದಾನಂದ ಕುಂಬಾರ ಬೆಳಗಲಿ ಸಾಧನೆಯನ್ನು ಮೆಚ್ಚಿ ಅಭಿನಂದಿಸಿದ್ದಾರೆ. ಇಂದು ಮುಂಜಾನೆ ಮಾನ್ಯ ಸಚಿವರು ಡಾ.ಚಿದಾನಂದ ಕುಂಬಾರ ಬೆಳಗಲಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ತಮಗಾದ ಅತೀವ ಸಂತೋಷ ಹಂಚಿಕೊಂಡಿದ್ದಾರೆ.

ಬಡತನದ ಮಧ್ಯೆ ಸಾಧನೆ ಮಾಡಿರೋ ಚಿದಾನಂದ ಕುಂಬಾರ ಅವರ ತಂದೆ ಕಲ್ಲಪ್ಪ ಕುಂಬಾರ ಕೂಲಿ ಮಾಡಿ ಮಗನಿಗೆ ವಿದ್ಯಾಭ್ಯಾಸ ಕೊಡಿಸಿದ್ದಾರೆ. ಸದ್ಯ ದೆಹಲಿಯಲ್ಲಿ ಇರುವ ಯುವಕ ಚಿದಾನಂದ ಕುಂಬಾರ ಪರವಾಗಿ ಅವರ ತಂದೆ ಕಲ್ಲಪ್ಪ ಅವರನ್ನ ಗ್ರಾಮಸ್ಥರು ಸನ್ಮಾನಿಸಿದ್ದಾರೆ. ಊರ ಮಗನ ಸಾಧನೆಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಬೇರೆಯವರ ಹೊಲದಲ್ಲಿ ಕೃಷಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ, ಬಡತನದ ಮಧ್ಯೆ ಮಗನಿಗೆ ಉತ್ತಮ ಶಿಕ್ಷಣ ಕೂಡಿಸಿರಿವುದು ಸಾಧನೆ ಮತ್ತೊಂದು ಗರಿ ಸಿಕ್ಕಿದಂತಾಗಿದ್ದು, ಇಡೀ ರಾಜ್ಯಕ್ಕೆ ಪ್ರಥಮ ವಾಗಿ, ಉತ್ತರ ಕರ್ನಾಟಕ ಪ್ರತಿಭೆಯು ಇಡೀ ದೇಶಕ್ಕೆ ಗಮನ ಸೆಳೆಯುವಂತಾಗಿದೆ.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ