ಬೆಳಗಾವಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅನಿವಾರ್ಯ ಹಾಗೂ ಅವಶ್ಯಕವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಜಪೇಯಿ ನಂತರ ಕೇಂದ್ರದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಅನಿವಾರ್ಯ ಹಾಗೂ ಅವಶ್ಯಕವಾಗಿದೆ.
ಕ್ರಿಯಾಶೀಲವಾಗಿ ಕೆಲಸ ಮಾಡುವ ಎರಡನೇ ನಾಯಕತ್ವ ರಾಜ್ಯಕ್ಕೆ ಬೇಕಾಗಿದೆ. ಬಿಎಸ್ವೈ ಯುಗ ಅಂತ್ಯವಾಗಿದೆ. ಅವರ ಸಮಕಾಲೀನ ಇನ್ನೂ ಮೂರ್ನಾಲ್ಕು ಜನರದ್ದು ಯುಗ ಮುಗಿಯಲು ಬಂದಿದೆ. ಬಸವರಾಜ ಬೊಮ್ಮಾಯಿ ಬದಲಾವಣೆ ಆಗುತ್ತಾರೆ ಎಂದು ನಾನು ಹೇಳುವುದಿಲ್ಲ ಎಂದರು.
ಆದರೆ, ಎರಡನೇ ನಾಯಕತ್ವ ಪಕ್ಷಕ್ಕೆ ಬೇಕಾಗಿದೆ. ಇದಕ್ಕಾಗಿ ಹೊಸ ಪ್ರಕ್ರಿಯೆ ನಡೆದಿದೆ. ಮುಂದಿನ ಚುನಾವಣೆಗೆ ಪಕ್ಷದ ವರಿಷ್ಠರು ಒಳ್ಳೆ ಟೀಮ್ ಮಾಡಲಿದ್ದಾರೆ. ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರ ತರುವ ಪ್ಲ್ಯಾನ್ ಇಟ್ಟುಕೊಂಡೇ ಬದಲಾವಣೆ ಮಾಡುತ್ತಿದ್ದಾರೆ ಎಂದರು.
ಟೀಮ್ ಮಾಡಲಿದ್ದಾರೆ. ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರ ತರುವ ಪ್ಲ್ಯಾನ್ ಇಟ್ಟುಕೊಂಡೇ ಬದಲಾವಣೆ ಮಾಡುತ್ತಿದ್ದಾರೆ ಎಂದರು.
ಯುಗಾದಿ ವೇಳೆಗೆ ಬದಲಾವಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಹೋಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಂಸದರ ಜೊತೆಗೆ ಚರ್ಚಿಸಲು ಸಿಎಂ ದೆಹಲಿಗೆ ಹೊರಟಿದ್ದಾರೆ. ರಾಜ್ಯದ ಅಭಿವೃದ್ಧಿ ವಿಚಾರದ ಕುರಿತು ಸಂಸದರ ಜೊತೆಗೆ ಚರ್ಚಿಸಿ ಕೇಂದ್ರದ ಮೇಲೆ ಒತ್ತಡ ತರುವ ಸಂಪ್ರದಾಯ ಮೊದಲಿನಿಂದಲೂ ಇದೆ. ಸಂಸದರ ಸಭೆ ಹಿನ್ನೆಲೆ ದೆಹಲಿಗೆ ಹೋಗುತ್ತಿರಬಹುದು ಎಂದರು.