Breaking News

ಶಶಿಕಲಾರಿಂದ ಲಂಚ ಪಡೆದ ಆರೋಪ ಪ್ರಕರಣ.. ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸಿದ ಎಸಿಬಿ

Spread the love

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆಯಡಿ ಜೈಲು ಶಿಕ್ಷೆ ಅನುಭವಿಸಿರುವ ತಮಿಳುನಾಡಿನ ಮಾಜಿ‌ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ವಿ.ಶಶಿಕಲಾ ಹಾಗೂ ಜೈಲಾಧಿಕಾರಿಗಳಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜೈಲಿನಲ್ಲಿ ರಾಜಾತಿಥ್ಯ ಕಲ್ಪಿಸಲು ಶಶಿಕಲಾರಿಂದ ಲಂಚ ಪಡೆದ ಆರೋಪ ಪ್ರಕರಣದ ತನಿಖೆ ಕೈಗೊಂಡಿದ್ದ ಎಸಿಬಿ ಇದೀಗ ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಶಿಕಲಾ, ಇಳವರಸಿಯಿಂದ ಹಣ ಪಡೆದು‌ ರಾಜಾತಿಥ್ಯ ಕಲ್ಪಿಸಿದ ಆರೋಪದಡಿ ಆಗಿನ ಜೈಲಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಕೋರ್ಟ್​ಗೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಹೆಸರು ಉಲ್ಲೇಖಿಸಲಾಗಿದೆ.

ಪ್ರಕರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಅಪಾದನೆ ಹಿನ್ನೆಲೆ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಹಾಗೂ ಪ್ರಾಸಿಕ್ಯೂಷನ್​​​ಗೆ ರಾಜ್ಯ ಸರ್ಕಾರ ಪೂರ್ವಾನುಮತಿ ನೀಡಿತ್ತು. 2017ರಂದು ಅಕ್ರಮ ಆಸ್ತಿಗಳಿಕೆ‌ ಪ್ರಕರಣದಡಿ ಜೈಲು ಸೇರಿದ್ದ ಶಶಿಕಲಾ ಹಾಗೂ ಇಳವರಸಿ 2021ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.


Spread the love

About Laxminews 24x7

Check Also

ಶಾಸಕ ವೀರೇಂದ್ರ ಬಂಧನ ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಅರ್ಜಿಯ ಆದೇಶ ಕಾಯ್ದಿರಿಸಿದ ಹೈಕೋರ್ಟ್

Spread the loveಬೆಂಗಳೂರು: ಆನ್​ಲೈನ್ ಮತ್ತು ಆಫ್​ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಕಾನೂನುಬಾಹಿರವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ