Breaking News

ಯಾದಗಿರಿ | ಶೇಂಗಾ ಬೆಲೆ ಕುಸಿತ; ರೈತ ಕಂಗಾಲು

Spread the love

ಯಾದಗಿರಿ: ಜಿಲ್ಲೆಯ ಹಿಂಗಾರು ಹಂಗಾಮಿನ ಪ್ರಮುಖ ಬೆಳೆಯಾದ ಶೇಂಗಾ ದರ ಕುಸಿತ ಕಂಡಿದ್ದು, ರೈತರು ಕಂಗಾಲಾಗಿದ್ದಾರೆ.

ಯಾದಗಿರಿ ಮತ್ತು ಗುರುಮಠಕಲ್ ತಾಲ್ಲೂಕಿನಲ್ಲಿ ಅತಿ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಲಾಗಿದ್ದು, ಈಗ ಉತ್ತಮ ಬೆಳೆ ಬಂದಿದೆ.

ಆದರೆ, ಸೂಕ್ತ ಬೆಲೆ ಇಲ್ಲದೆ ರೈತರು ಕಡಿಮೆ ದರಕ್ಕೆ ಮಾರಾಟ ಮಾಡುತ್ತಿದ್ದಾರೆ.

ಜಮೀನುಗಳಿಂದ ಆಟೊ, ಟಂಟಂ, ಟ್ರ್ಯಾಕ್ಟರ್ ಗಳ ಮೂಲಕ ಶೇಂಗಾ ಆವಕವನ್ನು ಯಾದಗಿರಿ ಎಪಿಎಂಸಿಗೆ ತರಲಾಗುತ್ತಿದೆ. ಆದರೆ, ಬೆಲೆ ಕುಸಿತದಿಂದ ರೈತರು ಸಿಕ್ಕ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಬಿತ್ತನೆ ಬೀಜ, ಕೂಲಿಯಾಳು ಖರ್ಚು‍, ರಾಯಸಾಯನಿಕ ಗೊಬ್ಬರ, ರಬ್ಬರ್ ಹುಳು ಬಾಧೆ ನಿಯಂತ್ರಣಕ್ಕಾಗಿ ಸಾವಿರಾರು ರೂಪಾಯಿ ಖರ್ಚು ಮಾಡಿದ್ದಾರೆ. ಬೆಳೆ ಬೆಳೆದ ನಂತರ ಮಾರುಕಟ್ಟೆಯಲ್ಲಿ ಯೋಗ್ಯ ದರವಿಲ್ಲದೇ ರೈತಾಪಿ ವರ್ಗ ತೊಂದರೆ ಪಡುತ್ತಿದೆ.

‘ಬಿತ್ತನೆ ಬೀಜ ಪಡೆಯಲು ಪರದಾಡಬೇಕಾಯಿತು. ಈಗ ಸೂಕ್ತ ದರವಿಲ್ಲದೇ ಬೆಳೆ ಮಾರಾಟ ಮಾಡಲಾರದ ಪರಿಸ್ಥಿತಿಗೆ ಬಂದಿದ್ದೇವೆ. ವ್ಯಾಪಾರಿಗಳು ಕಡಿಮೆ ಬೆಲೆಗೆ ಕೇಳುತ್ತಿದ್ದಾರೆ.‌ ಗ್ರಾಮದಿಂದ ತಂದಿರುವ ಖರ್ಚು ಲೆಕ್ಕನೋಡಿದರೆ ಲಾಭವೇ ಇಲ್ಲದಂತಾಗಿದೆ‌. ಎನೂ ಮಾಡಬೇಕು ಎಂದು ತಿಳಿಯುತ್ತಿಲ್ಲ’ ಎನ್ನುತ್ತಾರೆ ರೈತ ವೆಂಕಟೇಶ ಕುಂಬಾರ.

ಮುಂಬೈಗೆ ರಫ್ತಾಗುತ್ತಿದ್ದ ಶೇಂಗಾ: ಜಿಲ್ಲೆಯಲ್ಲಿ ಬೆಳೆಯುವ ಶೇಂಗಾ ಬೀಜಕ್ಕೆ ದೇಶ ವಿದೇಶಗಳಲ್ಲಿ ಬೇಡಿಕೆ ಇತ್ತು. ಯಾದಗಿರಿ ಜಿಲ್ಲೆಯಿಂದ ಮಹಾರಾಷ್ಟ್ರದಿಂದ ಆಸ್ಟ್ರೇಲಿಯಾ ಸೇರಿದಂತೆ ವಿವಿಧ ಕಡೆ ರಫ್ತು ಆಗುತ್ತಿತ್ತು. ಆದರೆ, ಜಿಲ್ಲೆಯಲ್ಲಿ ಮೊದ ಮೊದಲು ಮಾತ್ರ ಬೀಜ ತೆಗೆದುಕೊಳ್ಳುತ್ತಿದ್ದರು. ಈಗ ವ್ಯಾಪಾರಿಗಳಿಗೆ ದರ ಕಡಿಮೆಯಾಗಿದ್ದರಿಂದ ಅವರು ಹೆಚ್ಚಿನ ದರಕ್ಕೆ ಖರೀದಿ ಮಾಡುತ್ತಿಲ್ಲ. ಇದರಿಂದ ರೈತರು ಕಡಿಮೆ ಬೆಲೆಗೆ ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ.ಇಳುವರಿ ಕುಂಠಿತ: ಜಿಲ್ಲೆಯಲ್ಲಿ ಮೊದಲ ಬಾರಿಗೆ ಬರುವ ಶೇಂಗಾ ಬೀಜ ಗುಣಮಟ್ಟ ಇರುವುದರಿಂದ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತದೆ. ಆ ನಂತರ ಬರುವ ಬೀಜದ ಗುಣಮಟ್ಟ ಇಳಿಕೆಯಾಗುತ್ತಿದ್ದಂತೆಯೇ ದರವೂ ಇಳಿಕೆಯತ್ತ ಸಾಗುತ್ತದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ