ಮಂಗಳೂರು: ಕಾರಿನ ಬ್ರೇಕ್ ಕೆಳಗೆ ವಾಟರ್ ಬಾಟ್ಲಿ ಸಿಕ್ಕಿ ಬೈಕ್ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉರ್ವಾದ ಚಿಲಿಂಬಿ- ಮಠದಕಣಿ ಕ್ರಾಸ್ ರೋಡ್ ನಲ್ಲಿ ಈ ಅವಘಡ ಸಂಭವಿಸಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರನ್ನು ವಿವೇಕಾನಂದ ಶೆಣೈ (63) ಎಂಬವರು ಚಲಾಯಿಸುತ್ತಿದ್ದರು.
ಕಾರಿನ ಬ್ರೇಕ್ ಪೆಡಲ್ ಅಡಿ ನೀರಿನ ಬಾಟ್ಲಿ ಸಿಲುಕಿದ್ದರಿಂದ ಬ್ರೇಕ್ ಪೆಡಲ್ ವರ್ಕ್ ಆಗದೆ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆಕಾರಿನ ಬ್ರೇಕ್ ಪೆಡಲ್ ಅಡಿ ನೀರಿನ ಬಾಟ್ಲಿ ಸಿಲುಕಿದ್ದರಿಂದ ಬ್ರೇಕ್ ಪೆಡಲ್ ವರ್ಕ್ ಆಗದೆ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ