Breaking News

ಬಸ್ ನಿಲ್ದಾಣ‌ದ ಮೇಲೆ ಟಿಪ್ಪು ಧ್ವಜ

Spread the love

ಲಿಂಗಸುಗೂರು: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರ ತೆರವುಗೊಳಿಸಿದ್ದನ್ನು ಖಂಡಿಸಿ ಆಯೋಜಿಸಿದ್ದ ಪ್ರತಿಭಟನೆ ಸಂದರ್ಭದಲ್ಲಿ ಕೆಲವರು ಬಸ್‍ ನಿಲ್ದಾಣದ ಗೋಪುರದ ಮೇಲೆ ಟಿಪ್ಪು ಸುಲ್ತಾನ್ ಸಂಘದ ಧ್ವಜ ಅಳವಡಿಸಿದ್ದರಿಂದ ಕೆಲ ಸಮಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು.

 

ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿದ್ದ ಪ್ರತಿಭಟನೆ ಗುರುವಾರ ಮಧ್ಯಾಹ್ನ ಬಸ್‍ ನಿಲ್ದಾಣದತ್ತ ಬರುತ್ತಿದ್ದಂತೆ ಪ್ರತಿಭಟನೆಯಲ್ಲಿದ್ದ ಕೆಲ ಯುವಕರು ಏಕಾಏಕಿ ಬಸ್‍ ನಿಲ್ದಾಣದ ಒಳಗಡೆ ನುಗ್ಗಿ ಕಟ್ಟಡದ ಗೋಪುರದ ಮೇಲೆ ಏರಿ ಧ್ವಜ ಕಟ್ಟಿ ಜಯಘೋಷ ಹಾಕಿದರು. ತಕ್ಷಣವೇ ಎಚ್ಚೆತ್ತುಕೊಂಡ ಮುಖಂಡರು ಧ್ವಜ ತೆರವುಗೊಳಿಸಿದರು.

ಡಿವೈಎಸ್ಪಿ ಎಸ್‍.ಎಸ್‍. ಹುಲ್ಲೂರು ಹಾಗೂ ಪೊಲೀಸ್‍ ಅಧಿಕಾರಿಗಳು ಬಸ್‍ ನಿಲ್ದಾಣದಲ್ಲಿ ಜರುಗಿದ ಘಟನೆ ನಿಯಂತ್ರಿಸಲು ಹರಸಾಹಸ ಪಟ್ಟರು. ಧ್ವಜ ಕಟ್ಟಿದ ಯುವಕರನ್ನು ಕರೆದೊಯ್ಯಲು ಬಿಡದೆ ಪೊಲೀಸರಿಗೆ ಪ್ರತಿಭಟನಕಾರರು ಅಡ್ಡಿಪಡಿಸಿದರು.

ಪ್ರಕರಣ ದಾಖಲು: ‘ಬಡಿಗೆ, ಧ್ವಜಗಳನ್ನು ಹಿಡಿದು ಒಳ ನುಗ್ಗಿದ 150ಕ್ಕೂ ಹೆಚ್ಚು ಯುವಕರು ಕರ್ತವ್ಯಕ್ಕೆ ಅಡ್ಡಿಪಡಿಸಿ, ಸಾರ್ವಜನಿಕ ಕಟ್ಟಡದ ಮೇಲೆ ಧ್ವಜ ಕಟ್ಟುವ ಜೊತೆಗೆ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಸಂಚು ನಡೆಸಿದ್ದಾರೆ’ ಎಂದು ಬಸ್‌ ನಿಲ್ದಾಣದ ಕಂಟ್ರೋಲರ್ ಮುರ್ತುಜಾಸಾಬ ಹಜರಲಿ ಸಾಬ್‍ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ