ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರವರ ಜಾತಿ-ಧರ್ಮ ಅವರ ಜೊತೆಯೇ ಇರುತ್ತದೆ. ಆದ್ರೆ, ಶಾಲಾ ಕಾಲೇಜುಗಳಲ್ಲಿ ಜಾತಿ-ಧರ್ಮ ತರುವುದು ಸರಿಯಲ್ಲ. ಸರ್ಕಾರ ಈ ಹಿಜಾಬ್, ಕೇಸರಿ ಶಾಲು ವಿವಾದ ತಡೆಯಲು ಮುಂದಾಗಬೇಕು. ಎಲ್ಲ ಕಡೆ ಸ್ಪ್ರೆಡ್ ಆದ್ರೆ ಬಹಳ ದೊಡ್ಡ ಸಮಸ್ಯೆ ಆಗುತ್ತದೆ ಎಂದರು.
ರಾಮದುರ್ಗದಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿರುವುದು ಸರಿಯಲ್ಲ. ಆ ರೀತಿ ಎಲ್ಲೂ ನಡೆಯಬಾರದು ಎಂಬುದು ನಮ್ಮ ಕಳಕಳಿಯ ಮನವಿ. ಇಲ್ಲಿ ರಾಜಕಾರಣ ಇಲ್ಲ. ಆದರೆ, ಧರ್ಮದ ವ್ಯವಸ್ಥೆ ಆ ರೀತಿ ಮಾಡುತ್ತಿದೆ.ಮೊದಲು ಧರ್ಮಗಳನ್ನು ಪೂರ್ಣ ಅಧ್ಯಯನ ಮಾಡಬೇಕು. ಕೇಸರಿ ಶಾಲು ಹಾಕು, ಮತ್ತೊಂದು ಶಾಲು ಹಾಕು ಅಂತಾ ಯಾವುದೇ ಧರ್ಮಗಳು ಹೇಳಿಲ್ಲ. ಧರ್ಮಗಳು ಒಳ್ಳೆಯದನ್ನೇ ಹೇಳಿವೆ. ಆದರೆ, ಕೆಲವು ಸಂಘಟನೆಗಳಿಂದ ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.