Breaking News

ಮಿನಿ ವಿಧಾನಸೌಧವನ್ನೇ ಮಾರಾಟಕ್ಕಿಟ್ಟಿದ್ದ ರೈತನ ಸಾವು..!

Spread the love

ವಿಜಯಪುರ: ನಾಪತ್ತೆಯಾಗಿದ್ದ ರೈತ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹೂವಿನಡಗಲಿಯಲ್ಲಿ ನಡೆದಿದೆ. ಬಣಕಾರ್ ಮಲ್ಲಪ್ಪ ಮೃತ ರೈತ. ಬಣಕಾರ್ ಮಲ್ಲಪ್ಪ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ.

 

ಬಣಕಾರ್ ಮಲ್ಲಪ್ಪ ಹೂವಿನಡಗಲಿಯ ನಂದಿಹಳ್ಳಿ ಗ್ರಾಮದವರು. ಇವರ ಜಮೀನಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣವನ್ನ ವಿರೋಧಿಸಿದ್ದರು. ಅದಕ್ಕಾಗಿ ಸಾಕಷ್ಟು ಹೋರಾಟವನ್ನು ಮಾಡಿದ್ದವರು. ಅಷ್ಟೇ ಅಲ್ಲ ಅಕ್ರಮವಾಗಿ ಲೇಔಟ್ ನಿರ್ಮಾಣ ಮಾಡಿದ್ದವರ ವಿರುದ್ಧ ಹೋರಾಟ ಮಾಡುತ್ತಿದ್ದರು. ಇದೀಗ ಇದ್ದಕ್ಕಿದ್ದ ಹಾಗೇ ಶವವಾಗಿ ಪತ್ತೆಯಾಗಿದ್ದಾರೆ.

ತಮ್ಮ ಜಮೀನಿನಲ್ಲಿ ನಿರ್ಮಾಣವಾಗುತ್ತಿರುವ ಮಿ‌ಜ ವಿಧಾನಸೌಧ ವಿರೋಧಿಸಿದ್ದರು. ಪರಿಹಾರ ನೀಡುವಂತೆ ಒತ್ತಾಯಿಸಿ, ಪ್ರತಿಭಟನೆ ಕೂಡ ಮಾಡಿದ್ದರು. ಅಧಿಕಾರಿಗಳ ವಿರುದ್ಧ ಹೈಕೋರ್ಟ್ ತನಕ ಹೋಗಿದ್ದರು. ಆದ್ರೆ ಜನವರಿ 30ರಂದು ಇದ್ದಕ್ಕಿದ್ದ ಹಾಗೇ ನಾಪತ್ತೆಯಾಗಿದ್ದರು. ಜ.31ರಂದು ಈ ಸಂಬಂಧ ಹೂವಿನಡಗಲಿಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಇದೀಗ ಶವ ಪತ್ತೆಯಾಗಿದ್ದು, ಶವದ ಪಕ್ಕ ವಿಷದ ಬಾಟೆಲ್ ಕೂಡ ಪತ್ತೆಯಾಗಿದೆ.


Spread the love

About Laxminews 24x7

Check Also

ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

Spread the loveತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು ಮಂಗಳೂರು (ದಕ್ಷಿಣ ಕನ್ನಡ) : ನಿವೃತ್ತರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ