Breaking News

ತುಮಕೂರಲ್ಲಿ ಆರ್ಕೆಸ್ಟ್ರಾ ಕಲಾವಿದರನ್ನ ವೇಶ್ಯಾವಾಟಿಕೆ ದೂಡಲು ಯತ್ನ! ದಿನಕ್ಕೆ ಒಂದೂವರೆ ಸಾವಿರ ಕೊಡ್ತಾರೆ. ಆಡಿಯೋ ವೈರಲ್​

Spread the love

ತುಮಕೂರು: ಆರ್ಕೆಸ್ಟ್ರಾ ಕಲಾವಿದೆಯರನ್ನ ವೇಶ್ಯಾವಾಟಿಕೆಗೆ ಬರುವಂತೆ ಹಣದ ಆಮಿಷವೊಡ್ಡಿದ ಆರೋಪ ಆರ್ಕೆಸ್ಟ್ರಾ ಮಾಲೀಕ ವಿರದ್ಧವೇ ಕೇಳಿಬಂದಿದೆ. ದಿನಕ್ಕೆ ಒಂದೂವರೆ ಸಾವಿರ ಕೊಡ್ತಾರೆ. ಏನೂ ತೊಂದರೆ ಆಗಲ್ಲ, ನಾನೂ ಜತೆಯಲ್ಲೇ ಇರ್ತೀನಿ… ಎಂದು ಮಹಿಳಾ ಕಲಾವಿದೆಯೊಬ್ಬರ ಜತೆ ಸಂಭಾಷಣೆ ನಡೆಸಿದ ಆಡಿಯೋ ವೈರಲ್​ ಆಗಿದೆ.

 

ತುಮಕೂರಿನ ಸಂಜಯ್ ಮೆಲೋಡಿಸ್ ಆರ್ಕೆಸ್ಟ್ರಾ ಮಾಲೀಕ ನಾಣಿ ಹಂದ್ರಾಳ್ ಆರೋಪಿ. ಮಹಿಳಾ ಕಲಾವಿದೆಯರಿಗೆ ಕರೆ ಮಾಡಿ ನಾಣಿ ಹಂದ್ರಾಳ್ ಹಣದ ಆಮಿಷವೊಡ್ಡಿದ ಆಡಿಯೋ ವೈರಲ್ ಆಗಿದೆ.

ಆರ್ಕೆಸ್ಟ್ರಾ ಕಲಾವಿದೆಯರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸಿದ ನಾಣಿ‌ ಹಂದ್ರಾಳ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ತುಮಕೂರಿನ ಜಯನಗರ ಪೊಲೀಸ್ ಠಾಣೆಗೆ ಕಲ್ಪತರುನಾಡು ಆರ್ಕೆಸ್ಟ್ರಾ ಮಾಲೀಕರು ಹಾಗೂ ಕ್ಷೇಮಾಭಿವೃದ್ಧಿ ಸಂಘ ದೂರು ನೀಡಿದೆ.

ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿದ ಆರ್ಕೇಸ್ಟ್ರಾ ಮಾಲೀಕರು ಹಾಗೂ ಕಲಾವಿದರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಟಿ.ಆರ್​.ರಂಗರಾಜು, ಕೆಲವರು ಕಲೆಯ ಹೆಸರಿನಲ್ಲಿ ಮೋಸ ಮಾಡಲು ಹೊರಟಿರುವುದು ತುಮಕೂರು ಜಿಲ್ಲೆಗೆ ಕೆಟ್ಟ ಹೆಸರು ತಂದಿದೆ. ಜಿಲ್ಲೆಯಲ್ಲಿ 90 ಆರ್ಕೇಸ್ಟ್ರಾ ತಂಡಗಳಿಗೆ ಸೇರಿದ ಗಾಯಕರು, ಹಿನ್ನೆಲೆ ಸಂಗೀತಗಾರರು, ನೃತ್ಯಗಾರರು ಕಷ್ಟ ಅನುಭವಿಸುವಂತಾಗಿದೆ. ಅತಿ ಸಂಕಷ್ಟದಲ್ಲಿರುವ ಮಹಿಳಾ ಕಲಾವಿದರನ್ನು ಕೆಲವರು ಕಾರ್ಯಕ್ರಮ ಕೊಡಿಸುವ, ಹೆಚ್ಚಿನ ದುಡ್ಡು ಕೊಡಿಸುವ ಆಸೆ ತೋರಿಸಿ ಆಯೋಜಕರೊಂದಿಗೆ ಸಹಕರಿಸುವಂತೆ ಒತ್ತಾಯಿಸಿರುವ ಮೊಬೈಲ್​ ಸಂಭಾಷಣೆ ಇದೆ ಎಂದರು.

ಸಂಕಷ್ಟದಲ್ಲಿರುವ ಕಲಾವಿದರ ಅಸಹಾಯಕತೆ ದುರುಪಯೋಗ ಮಾಡಿಕೊಂಡು ಕೆಲವು ಮಹಿಳಾ ಕಲಾವಿದರನ್ನು ವೇಶ್ಯಾವಾಟಿಕೆಗೆ ದೂಡುವ ಯತ್ನ ನಡೆಯುತ್ತಿದೆ. ಪ್ರಸ್ತುತ ಮಹಿಳಾ ಕಲಾವಿದರನ್ನು ಕೆಟ್ಟದಾಗಿ ಬಳಸಿಕೊಳ್ಳಲು ನೋಡಿದ ತಂಡದ ಮಾಲೀಕರು ಬೆಂಗಳೂರಿನ ಸಂಘದಲ್ಲಿ ಪದಾಧಿಕಾರಿಯಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಸುದ್ದಿಗೋಷ್ಠಿಯಲ್ಲಿ ಕಲ್ಪತರು ನಾಡು ತುಮಕೂರು ಆರ್ಕೇಸ್ಟ್ರಾ ಮಾಲೀಕರು ಮತ್ತು ಕಲಾವಿದರ ಕ್ಷೇಮಾಭಿವೃದ್ಧಿ ಸಂಘದ ಕೆ.ನಾಗರಾಜು, ಮಧುಸೂದನ್​, ಅಖಿಲೇಶ್​, ಶಿವಣ್ಣ, ಮಂಜು, ಕವಿರಾಜು ಇದ್ದರು.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ