Breaking News

ಪೊಲೀಸ್ ಬಿಗಿ ಬಂದೋಬಸ್ತಿಯ ನಡುವೆ ಕಾಲೇಜು ಪ್ರಾರಂಭ: ಸಮವಸ್ತ್ರ ಧರಿಸಿದವರಿಗೆ ಮಾತ್ರ ಪ್ರವೇಶ

Spread the love

ರಬಕವಿ-ಬನಹಟ್ಟಿ : ಹಿಜಾಬ್ ಹಾಗೂ ಕೇಸರಿ ಶಾಲು ಪ್ರಕರಣದ ಹಿನ್ನಲೆಯಲ್ಲಿ ಬನಹಟ್ಟಿಯಲ್ಲಿ ಕಳೆದ ಒಂದು ವಾರದಿಂದ ಬಂದ್ ಆಗಿದ್ದು, ಕಾಲೇಜು ಇಂದು ಬುಧವಾರ ಪೊಲೀಸ್ ಬಿಗಿ ಭದ್ರತೆಯ ನಡುವೆ ಪ್ರಾರಂಭವಾಗಿದ್ದು, ಸಮವಸ್ತ್ರ ಧರಿಸಿದವರಿಗೆ ಮಾತ್ರ ಪ್ರವೇಶ ನೀಡಲಾಯಿತು.

 

ತಾಲೂಕಿನಲ್ಲಿ ನಡೆದ ಅಹಿತಕರ ಘಟನೆ ಮತ್ತೇ ಸಂಭವಿಸಬಾರದು ಎಂದು ಪೊಲೀಸ್ ಇಲಾಖೆ ಹಾಗೂ ತಾಲೂಕು ಆಡಳಿತ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದು ಸೂಕ್ಷ್ಮ ಶಾಲಾ, ಕಾಲೇಜು ಪ್ರದೇಶಗಳಲ್ಲಿ ಅಗತ್ಯ ಬಂದುಬಸ್ತಿಯನ್ನು ನಿಯೋಜನೆ ಮಾಡದೆ. ಅಲ್ಲದೇ ಜಿಲ್ಲಾಧಿಕಾರಿಯವರು ಶಾಲಾ ಕಾಲೇಜಿನ ಸುತ್ತ ಮುತ್ತಲೂ 144 ಕಲಂ ಜಾರಿ ಮಾಡಿದ್ದು ಯಾವುದೇ ಜನ ಶಾಲಾ, ಕಾಲೇಜುಗಳಿಗೆ ಪ್ರವೇಶಿಸುವಂತಿಲ್ಲ.

ಇಂದು ಬುಧವಾರ ಕಾಲೇಜು ಆರಂಭವಾದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕಾಲೇಜಿಗೆ ಆಗಮಸಿದ್ದರು. ಕೆಲವರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು ಕೂಡಾ ಅವುಗಳನ್ನು ತೆಗೆದು ಕಾಲೇಜು ಪ್ರವೇಶಿಸಿದರೆ ಕೆಲವರು ಹಿಜಾಬ್ ತೆಗೆಯಲು ನಿರಾಕರಿಸಿದ್ದರಿಂದ ಅವರನ್ನು ಕಾಲೇಜು ಸಿಬ್ಬಂದಿ ಕಾಲೇಜಿಗೆ ಸೇರಿಸಿಕೊಳ್ಳದೇ ವಾಪಸ್ ಮನೆಗೆ ಕಳುಹಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಎಸ್. ಬಿ. ಇಂಗಳೆ, ಡಿವಾಯ್‌ಎಸ್‌ಪಿ ಎಂ. ಪಾಂಡುರಂಗಯ್ಯ, ಸಿಪಿಐ ಜೆ. ಕರುಣೇಶಗೌಡ, ಪಿಎಸ್‌ಐ ಸುರೇಶ ಮಂಟೂರ ಸ್ಥಳಕ್ಕೆ ಬೇಟ್ಟಿ ನೀಡಿ ಪರೀಶೀಲನೆ ನಡೆಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ