Breaking News
Home / ರಾಜಕೀಯ / ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

Spread the love

ಚಂಡೀಗಢ: ಉತ್ತರಪ್ರದೇಶ, ಬಿಹಾರದವರನ್ನು ಪಂಜಾಬ್‍ಗೆ ಪ್ರವೇಶಿಸಲು ಬಿಡಬೇಡಿ ಎಂಬ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಹೇಳಿಕೆಗೆ ಬಿಜೆಪಿ ಹಾಗೂ ದೆಹಲಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

ಉತ್ತರಪ್ರದೇಶ ಮತ್ತು ಬಿಹಾರದ ಜನರನ್ನು ಪಂಜಾಬ್‍ನ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವಮಾನಿಸಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೂ ಚನ್ನಿ ಹೇಳಿಕೆಯನ್ನು ಟೀಕಿಸಿದ್ದಾರೆ. ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಮೆಂಟ್ ಮಾಡುವುದನ್ನು ಖಂಡಿಸುತ್ತೇನೆ. ಪ್ರಿಯಾಂಕಾ ಗಾಂಧಿ ಕೂಡ ಉತ್ತರ ಪ್ರದೇಶಕ್ಕೆ ಸೇರಿದವರು. ಆದ್ದರಿಂದ ಅವರನ್ನು ಬರಲು ಬಿಡಬಾರದು ಎಂದು ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಹೇಳಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ನಗುತ್ತಾ ಚಪ್ಪಾಳೆ ತಟ್ಟಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ