Breaking News

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಶೀಘ್ರವೇ ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ

Spread the love

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ 14 ಜಿಲ್ಲೆಗಳಿಗೆ ಅನುಮತಿ ನೀಡಿದ್ದು, ಶೇ. 30 ಕ್ಕಿಂತ ಹೆಚ್ಚಿನ ಹುದ್ದೆ ಖಾಲಿ ಇದ್ದ ಜಿಲ್ಲೆಗಳಲ್ಲಿ ನೇರ ನೇಮಕಾತಿ ಪ್ರಾರಂಭಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.

ಅಶೋಕ್ ತಿಳಿಸಿದ್ದಾರೆ.

ಕಂದಾಯ ಇಲಾಖೆ ಖಾಲಿ ಹುದ್ದೆಗಳ ಕುರಿತು ಬಿಜೆಪಿ ಸದಸ್ಯ ಎಸ್.ವಿ.ಸುಂಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.ಅಶೋಕ್, ಕಂದಾಯ ಇಲಾಖೆಯಲ್ಲಿ ಮಂಜೂರಾದ 2,645 ಹುದ್ದೆಗಳಲ್ಲಿ 1,482 ಮಾತ್ರ ಭರ್ತಿಯಾಗಿವೆ. ಅಗತ್ಯವಿರುವ ಗ್ರೂಪ್ ಸಿ ವೃಂದದ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಇನ್ನೂ ಎರಡು ದಿನ ಮಹಾಮಳೆ

Spread the loveಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ (ಜು.7) ಜೋರು ಗಾಳಿ ಸಹಿತ ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ