Breaking News

ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈ ಓವರ್ ಮುಕ್ತ

Spread the love

ನಗರದ ವಾಹನ ಸವಾರರಿಗೆ ಸಿಹಿಸುದ್ದಿ. ಸುಮಾರು 56 ದಿನಗಳ ಬಳಿಕ ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಬುಧವಾರ ಮುಕ್ತವಾಗಿದೆ.

ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಬುಧವಾರ ಮುಕ್ತವಾಗಿದೆ.

ಪೀಣ್ಯ ಎಲಿವೇಡೆಡ್ ಮೇಲ್ಸೆತುವೆಯ 102 ಮತ್ತು 103ನೇ ಕಂಬಗಳ ನಡುವೆ ತಾಂತ್ರಿಕ ದೋಷವಿದೆ ಎಂದು ಡಿಸೆಂಬರ್ 26ರಂದು ಫ್ಲೈ ಓವರ್ ಎರಡೂ ಕಡೆ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಎನ್‌ಎಚ್‌ಎಐ ದುರಸ್ತಿ ಕಾಮಗಾರಿ ಪೂರ್ಣಗೊಳಿಸಿದೆ.

 

ಬುಧವಾರ ಸಂಜೆಯಿಂದಲೇ ಕಾರು, ಬೈಕ್, ಆಟೋಗಳ ಸಂಚಾರಕ್ಕೆ ಫ್ಲೈ ಓವರ್ ಮೇಲೆ ಅವಕಾಶ ನೀಡಲಾಗಿದೆ. ಬಸ್, ಲಾರಿ ಸೇರಿದಂತೆ ಭಾರೀ ವಾಹನಗಳ ಸಂಚಾರಕ್ಕೆ ಅನುಮತಿ ಇಲ್ಲ. ಪೀಣ್ಯ ಸಂಚಾರಿ ಠಾಣೆ ಪೊಲೀಸರು ಈ ಕುರಿತು ಟ್ವೀಟ್ ಮಾಡಿದ್ದಾರೆ.

 

ಸುಮಾರು 56 ದಿನಗಳಿಂದ ಪೀಣ್ಯ ಫ್ಲೈ ಓವರ್ ಮೇಲೆ ಎರಡೂ ಕಡೆ ವಾಹನ ಸಂಚಾರ ಬಂದ್ ಆಗಿತ್ತು. ಇದರಿಂದಾಗಿಗ ಹೊರ ಜಿಲ್ಲೆಗಳಿಂದ ಬೆಂಗಳೂರು ನಗರಕ್ಕೆ ಬರುವ ಮತ್ತು ಬೆಂಗಳೂರು ನಗರದಿಂದ ಹೊರ ಹೋಗುವ ವಾಹನಗಳಿಗೆ ತೊಂದರೆಯಾಗಿತ್ತು. ಪ್ರತಿದಿನ ಕಿ. ಮೀ. ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿದ್ದವು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ