Breaking News

ಕಾಡಿನಿಂದ ನಾಡಿಗೆ ಬಂದ ಚಿರತೆ ಮರಿ

Spread the love

ಥಾಣೆ( ಮಹಾರಾಷ್ಟ್ರ): ಕಾಡಿನಿಂದ ನಾಡಿಗೆ ಬಂದ ಚಿರತೆ ಮರಿಯೊಂದು ನೀರು ಕುಡಿಯಲು ಹೋಗಿ ಪ್ಲಾಸ್ಟಿಕ್​ ನೀರಿನ ಕೊಡದಲ್ಲಿ ತೆಲೆ ಸಿಕ್ಕಿಸಿಕೊಂಡು ಪರದಾಡಿದ ಘಟನೆ ಬದ್ಲಾಪುರ – ಕರ್ಜಾತ್ ರಸ್ತೆಯ ಗೋರೆಗಾಂವ್ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಚಿರತೆ ಮರಿ ಹೀಗೆ ತಲೆಯನ್ನು ಸಿಕ್ಕಿಸಿಕೊಂಡು ಒದ್ದಾಡುವ ಪರಿಯನ್ನ ನೋಡಿದ ಗ್ರಾಮಸ್ಥರು, ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ಚಿರತೆಯನ್ನ ಹಿಡಿದು ಪ್ಲಾಸ್ಟಿಕ್​ ಕೊಡವನ್ನು ಕತ್ತರಿಸಿ ತೆಗೆದಿದ್ದಾರೆ. ನಂತರ ಚಿರತೆ ಮರಿಗೆ ಸಣ್ಣ ಪುಟ್ಟ ಗಾಯಗಾಳಿಗಿದ್ದು, ಚಿಕಿತ್ಸೆ ನೀಡಿ ಕಾಡಿಗೆ ಮರಳಿ ಬಿಟ್ಟಿದ್ದಾರೆ.

ಮೂರು ದಿನಗಳ ಹಿಂದೆ ಚಿರತೆ ರಾತ್ರಿ ನೀರು ಕುಡಿಯಲು ಬಂದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೂರು ದಿನಗಳಿಂದ ಚಿರತೆ ಪ್ಲಾಸ್ಟಿಕ್​​ ಕೊಡವನ್ನು ಹಾಗೇ ಇಟ್ಟುಕೊಂಡು ನರಾಳಿಡಿದೆ. ಮೂರು ದಿನದ ಹಿಂದೆ ರಸ್ತೆ ಮಧ್ಯದಲ್ಲೇ ಚಿರತೆ ನರಳಾಡುತ್ತಿದ್ದು, ಆ ಮಾರ್ಗವಾಗಿ ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಬಿದ್ದಿದೆ. ತಕ್ಷಣ ಅವರು ಚಿರತೆಯ ವಿಡಿಯೋ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕಳುಹಿಸಿದ್ದರು.

ಇದಾದ ಬಳಿಕ ಈ ವಿಡಿಯೋ ಆಧರಿಸಿ ನಿನ್ನೆ ರಾತ್ರಿಯಿಂದ ಚಿರತೆಗಾಗಿ ಹುಡುಕಾಟ ಆರಂಭಿಸಿದ್ದು, ಕೊನೆಗೂ 3 ದಿನಗಳ ಶೋಧ ಕಾರ್ಯಾಚರಣೆ ಬಳಿಕ ಬದ್ಲಾಪುರ ಸಮೀಪದ ಗೋರೆಗಾಂವ್ ಅರಣ್ಯ ಪ್ರದೇಶದಲ್ಲಿ ಚಿರತೆ ಸಿಕ್ಕಿದ್ದು, ಗ್ರಾಮಸ್ಥರ ಸಹಾಯದಿಂದ ಅಧಿಕಾರಿಗಳು ಚಿಕಿತ್ಸೆ ನೀಡಿ ನಂತರ ಕಾಡಿಗೆ ಮರಳಿ ಬಿಟ್ಟಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ