Breaking News

ಮಹಾತ್ಮ ಗಾಂಧೀಜಿ ಇದ್ದಾಗ ಇದ್ದಿದ್ದು ಬೇರೆ ಕಾಂಗ್ರೆಸ್, ಈಗ ಇರೋದ್ ನಕಲಿ ಕಾಂಗ್ರೆಸ್: ಆರ್.ಅಶೋಕ್

Spread the love

ಬೆಂಗಳೂರು: ಕೋಳಿನಾ ಕೇಳಿ ಖಾರ ಅರಿಯೋ ಅಭ್ಯಾಸ ಬಿಜೆಪಿಗಿಲ್ಲ. ಮಹಾತ್ಮ ಗಾಂಧೀಜಿ ಇದ್ದಾಗ ಇದ್ದಿದ್ದು ಬೇರೆ ಕಾಂಗ್ರೆಸ್. ಈಗ ಇರೋದ್ ನಕಲಿ ಕಾಂಗ್ರೆಸ್. ಸ್ವಾತಂತ್ರ್ಯ ಹೋರಾಟದಲ್ಲಿದ್ದ ಕಾಂಗ್ರೆಸ್​​ಗೂ ಈಗಿರುವ ಕಾಂಗ್ರೆಸ್​ಗೂ ಸಂಬಂಧವಿಲ್ಲ ಎಂದು ಆರ್.ಅಶೋಕ್ ಟೀಕಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಜಾ ಮಾಡುವುದಾದ್ರೆ ಕಾಂಗ್ರೆಸ್​​ನವರನ್ನು ವಜಾ ಮಾಡಬೇಕು. ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಬಾವುಟ ಹಾರಿಸಿ ಎಂದಾಗ ಎಲ್ಲಿದ್ದರು ಇವರು?, ಇದು ಕಾಂಗ್ರೆಸ್​​ನವರ ರಾಜಕೀಯ ದೊಂಬರಾಟ ಅಷ್ಟೇ. ಆರಾಮಾಗಿ ಧರಣಿ ಮಾಡಲಿ. ಮೋದಿ ಬಂದ ಮೇಲೆ ಇವರು ಎಲ್ಲಾ ಕಡೆ ನಿದ್ದೆ ಮಾಡ್ತಿದ್ದಾರೆ. ಎಲ್ಲಾ ಕಡೆ ಕಾಂಗ್ರೆಸ್ ಖಾಲಿ ಆಗ್ತಿದೆ. ಬಿಜೆಪಿ ಇಲ್ಲ ಅಂದಿದ್ರೆ ಕಾಂಗ್ರೆಸ್​​ಗೆ ಭಾರತ್ ಮಾತಾ ಕಿ ಜೈ ಎನ್ನುತ್ತಿರಲಿಲ್ಲ. ಇವರಿಗೆ ಇಟಲಿ ಮೇಲೆ ತುಂಬಾ ಆಸೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಅಹೋರಾತ್ರಿ ಧರಣಿ ವಿಚಾರ ಮಾತನಾಡಿ, ಸದನದಲ್ಲಿ ಆರಾಮಗಿ ನಿದ್ದೆ ಮಾಡ್ಲಿ. ಸರ್ಕಾರ ಎಲ್ಲಾ ವ್ಯವಸ್ಥೆ ಮಾಡುತ್ತೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್​​ನವರಿಗೆ ನೈತಿಕತೆ ಇಲ್ಲ. ಜಮ್ಮು ಕಾಶ್ಮೀರದಲ್ಲಿ ಉಗ್ರರ ಸವಾಲು ಮೆಟ್ಟಿ ‌ರಾಷ್ಟ್ರಧ್ವಜ ಹಾರಿಸಿದ್ದೇವೆ. ಅಲ್ಪಸಂಖ್ಯಾತರ ಓಲೈಕೆಗೆ ಕಾಂಗ್ರೆಸ್ ಮುಂದಾಗಿದೆ. ಇದೆಲ್ಲಾ ನಾಟಕ,‌ ಶೋ ಅಂತಾ ಕುಮಾರಸ್ವಾಮಿಯೇ ಹೇಳಿದ್ದಾರೆ. ನಿನ್ನೆಯ ಸದನದಲ್ಲಿ ನಡೆದ ವರ್ತನೆ ಕಾಂಗ್ರೆಸ್​​ನ ಗೂಂಡಾಗಿರಿ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ

Spread the loveಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ