Breaking News

ಮಹಾತ್ಮ ಗಾಂಧೀಜಿ ಇದ್ದಾಗ ಇದ್ದಿದ್ದು ಬೇರೆ ಕಾಂಗ್ರೆಸ್, ಈಗ ಇರೋದ್ ನಕಲಿ ಕಾಂಗ್ರೆಸ್: ಆರ್.ಅಶೋಕ್

Spread the love

ಬೆಂಗಳೂರು : ಕರ್ನಾಟಕ ಸ್ಟಾಂಪ್ (ತಿದ್ದುಪಡಿ) ವಿಧೇಯಕ ಹಾಗೂ ಕ್ರಿಮಿನಲ್ ಕಾನೂನು ತಿದ್ದುಪಡಿ ಆಧ್ಯಾದೇಶ, 1944 (ಕರ್ನಾಟಕ ತಿದ್ದುಪಡಿ ) ವಿಧೇಯಕಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಕಂದಾಯ ಸಚಿವ ಆರ್. ಅಶೋಕ್, ನೊಂದಾಯಿತ ಯಾವುದೇ ಗೃಹ ನಿರ್ಮಾಣ ಸಹಕಾರ ಸಂಘದ ನಿವೇಶನ ಮಾರಾಟ ಮಾಡಿದ ದಿನಾಂಕದಂದು ಇರುವ ಮಾರುಕಟ್ಟೆಯ ಮೌಲ್ಯದ ಮುದ್ರಾಂಕ ಶುಲ್ಕ ಪಾವತಿಸುವ ಸಂಬಂಧ ಕರ್ನಾಟಕ ಸ್ಟಾಂಪ್​ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು.

ಸಹಕಾರ ಸಂಘಗಳ ಅಧಿನಿಯಮದಡಿಯಲ್ಲಿ ನೊಂದಾಯಿಸಿದ ಯಾವುದೇ ಗೃಹ ನಿರ್ಮಾಣ ಸಹಕಾರ ಸಂಘದಿಂದ ಹಂಚಿಕೆಯಾದ ನಿವೇಶನವನ್ನು ಭೋಗ್ಯ ಮತ್ತು ಮಾರಾಟ ಕರಾರು ಮಾಡಿಕೊಳ್ಳಲಾಗುತ್ತದೆ. ಅಂತಹ ಮಾಡಿಕೊಂಡ ಕರಾರನ್ನು ಬರೆದುಕೊಟ್ಟ ದಿನಾಂಕದಂದು ಇದ್ದ ನಿವೇಶನದ ಮೌಲ್ಯದ ಮೇಲೆ ಇರಬೇಕು. ಇದರಿಂದ ಅಂದಾಜು ಐದರಿಂದ ಆರು ಕೋಟಿ ರೂ. ವಾರ್ಷಿಕವಾಗಿ ಸರ್ಕಾರಕ್ಕೆ ಕೊರತೆಯಾಗಲಿದೆ ಎಂದು ವಿಧೇಯಕದಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ