Breaking News
Home / ರಾಜಕೀಯ / ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು : ಪರಿಷತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ!

ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು : ಪರಿಷತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ!

Spread the love

ಬೆಂಗಳೂರು : ಸಚಿವ ಕೆ ಎಸ್‌ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ವಿಧಾನ ಪರಿಷತ್​​ನಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಶುಕ್ರವಾರದ ಕಲಾಪ ಬಲಿಯಾಯಿತು. ಕಾಂಗ್ರೆಸ್, ಬಿಜೆಪಿ ಸದಸ್ಯರ ವಾಗ್ವಾದ, ಆರೋಪ-ಪ್ರತ್ಯಾರೋಪಗಳ ಘೋಷಣೆ ಮೊಳಗಿ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಗಿದ್ದರಿಂದ ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಯಿತು.

ಬೆಳಗಿನ ಕಲಾಪ ಆರಂಭಗೊಳ್ಳುತ್ತಿದ್ದಂತೆ ಈಶ್ವರಪ್ಪ ವಿಷಯದ ಗದ್ದಲ ಆರಂಭಗೊಂಡಿದ್ದರಿಂದ ಕಲಾಪವನ್ನು 10 ನಿಮಿಷ ಮುಂದೂಡಲಾಯಿತು. ಮುಂದೂಡಿಕೆಯಾಗಿದ್ದ ಕಲಾಪ ಪುನಾರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಮಾತನಾಡಿ, ಸರ್ಕಾರದಿಂದ ಕ್ರಮದ ಭರವಸೆ ಸಿಗುವವರೆಗೂ ಧರಣಿ ಬಿಡಲ್ಲ. ಈಶ್ವರಪ್ಪ ವಜಾ ಆಗಲೇಬೇಕು ಎಂದರು.

ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ನಾರಾಯಣಸ್ವಾಮಿ, ಪ್ರಧಾನಿ ಮೋದಿಗೆ ಧಿಕ್ಕಾರ ಹಾಕಿದ್ದು ಸಂವಿಧಾನ ವಿರೋಧಿ. ಸಲೀಂ ಅಹಮದ್ ಅವರನ್ನು ಸದನದಿಂದ ಹೊರ ಹಾಕಬೇಕು ಎಂದು ಆಗ್ರಹಿಸಿದರು


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ