Breaking News

ಅನೂಪ್ ಭಂಡಾರಿ ಜತೆ ಮತ್ತೊಂದು ಚಿತ್ರ : ಸರ್ಪೈಸ್ ಕೊಟ್ಟ ಸುದೀಪ್

Spread the love

ಶುಕ್ರವಾರ ಬೆಳ್ಳಂಬೆಳಗ್ಗೆ ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ ಕಿಚ್ಚ ಸುದೀಪ್. ವಿಕ್ರಾಂತ್ ರೋಣ ಸಿನಿಮಾದ ತ್ರಿಡಿ ವರ್ಷನ್ ನೋಡಿ ಮೆಚ್ಚಿಕೊಂಡಿದ್ದಲ್ಲದೇ, ಈ ಮೂಲಕ ಇಡೀ ಚಿತ್ರತಂಡಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ.ವಿಕ್ರಾಂತ್ ರೋಣ ತ್ರಿಡಿ ಅದ್ಭುತವಾಗಿ ಮೂಡಿ ಬಂದಿದೆ. ಈ ಸಿನಿಮಾದ ಬಿಡುಗಡೆಯ ದಿನಾಂಕಕ್ಕಾಗಿ ನಾನು ಕಾಯುತ್ತಿದ್ದೇನೆ. ಜತೆಗೆ ನಿರ್ದೇಶಕ ಅನೂಪ್ ಭಂಡಾರಿ ಅವರ ಜತೆಗಿನ ಮತ್ತೊಂದು ಸಿನಿಮಾ ಕುರಿತಾದ ಮಾಹಿತಿ ಹಂಚಿಕೊಳ್ಳಲು ಕಾತುರನಾಗಿದ್ದೇನೆ” ಎಂದು ಸುದೀಪ್ ಟ್ವಿಟ್ ಮಾಡಿದ್ದಾರೆ. 

ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ ನ ‘ವಿಕ್ರಾಂತ್ ರೋಣ’ ಸಿನಿಮಾದ ಕೆಲಸ ಬಹುತೇಕ ಮುಗಿದಿದೆ. ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಕೋವಿಡ್ ಮತ್ತು ಸರಕಾರದ ಕೆಲ ನಿಯಮಗಳಿಂದಾಗಿ ಬಿಡುಗಡೆ ಎರಡೆರಡು ಬಾರಿ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದಾರೆ. ಈ ಬಾರಿ ಪಕ್ಕಾ ದಿನಾಂಕವನ್ನು ಗೊತ್ತು ಮಾಡಿಕೊಂಡು ಅಖಾಡಕ್ಕೆ ಇಳಿಯಲಿದೆಯಂತೆ ಚಿತ್ರತಂಡ.


Spread the love

About Laxminews 24x7

Check Also

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ

Spread the love ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ