ಶುಕ್ರವಾರ ಬೆಳ್ಳಂಬೆಳಗ್ಗೆ ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ ಕಿಚ್ಚ ಸುದೀಪ್. ವಿಕ್ರಾಂತ್ ರೋಣ ಸಿನಿಮಾದ ತ್ರಿಡಿ ವರ್ಷನ್ ನೋಡಿ ಮೆಚ್ಚಿಕೊಂಡಿದ್ದಲ್ಲದೇ, ಈ ಮೂಲಕ ಇಡೀ ಚಿತ್ರತಂಡಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ.ವಿಕ್ರಾಂತ್ ರೋಣ ತ್ರಿಡಿ ಅದ್ಭುತವಾಗಿ ಮೂಡಿ ಬಂದಿದೆ. ಈ ಸಿನಿಮಾದ ಬಿಡುಗಡೆಯ ದಿನಾಂಕಕ್ಕಾಗಿ ನಾನು ಕಾಯುತ್ತಿದ್ದೇನೆ. ಜತೆಗೆ ನಿರ್ದೇಶಕ ಅನೂಪ್ ಭಂಡಾರಿ ಅವರ ಜತೆಗಿನ ಮತ್ತೊಂದು ಸಿನಿಮಾ ಕುರಿತಾದ ಮಾಹಿತಿ ಹಂಚಿಕೊಳ್ಳಲು ಕಾತುರನಾಗಿದ್ದೇನೆ” ಎಂದು ಸುದೀಪ್ ಟ್ವಿಟ್ ಮಾಡಿದ್ದಾರೆ.
ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ ನ ‘ವಿಕ್ರಾಂತ್ ರೋಣ’ ಸಿನಿಮಾದ ಕೆಲಸ ಬಹುತೇಕ ಮುಗಿದಿದೆ. ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಕೋವಿಡ್ ಮತ್ತು ಸರಕಾರದ ಕೆಲ ನಿಯಮಗಳಿಂದಾಗಿ ಬಿಡುಗಡೆ ಎರಡೆರಡು ಬಾರಿ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದಾರೆ. ಈ ಬಾರಿ ಪಕ್ಕಾ ದಿನಾಂಕವನ್ನು ಗೊತ್ತು ಮಾಡಿಕೊಂಡು ಅಖಾಡಕ್ಕೆ ಇಳಿಯಲಿದೆಯಂತೆ ಚಿತ್ರತಂಡ.