Breaking News
Home / ರಾಜಕೀಯ / ಹಿಜಾಬ್ ಗಲಾಟೆ ನಡೆದ ಶಾಲೆಯಲ್ಲಿ ಮಕ್ಕಳಿಗೆ ಡಿಸಿ, ಎಸ್ ಪಿಯಿಂದ ಗಣಿತ ಪಾಠ

ಹಿಜಾಬ್ ಗಲಾಟೆ ನಡೆದ ಶಾಲೆಯಲ್ಲಿ ಮಕ್ಕಳಿಗೆ ಡಿಸಿ, ಎಸ್ ಪಿಯಿಂದ ಗಣಿತ ಪಾಠ

Spread the love

ಚಿಕ್ಕಮಗಳೂರು :ಚಿಕ್ಕಮಗಳೂರು ತಾಲೂಕಿನ ಇಂದಾವರ ಶಾಲೆಯಲ್ಲಿ ಹಿಜಾಬ್​​ಗಾಗಿ ಗಲಾಟೆ ನಡೆದಿತ್ತು. ಶಾಲೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಭೇಟಿ ನೀಡಿ, ಶಾಲಾ ಮಕ್ಕಳಿಗೆ ಪಾಠ ಮಾಡಿರುವ ಘಟನೆ ನಡೆದಿದೆ.

ಶಾಲೆಯ ಎಲ್ಲ ಮಕ್ಕಳಿಗೆ ಡಿಸಿ, ಎಸ್ಪಿ, ಸಿಇಓ ಪಾಠ ಮಾಡಿದ್ದಾರೆ. ಡಿಸಿ-ಎಸ್ಪಿ ಮಕ್ಕಳಿಗೆ ಗಣಿತ ಪಾಠ ಮಾಡಿದರೆ, ಜಿಲ್ಲಾ ಪಂಚಾಯಿತಿಯ ಸಿಇಒ ಸಮಾಜ ವಿಜ್ಞಾನ ಪಾಠ ಮಾಡಿದ್ದಾರೆ. ನಿನ್ನೆ ಪೋಷಕರು – ಮಕ್ಕಳು ಶಾಲೆ ಬಳಿ ಗಲಾಟೆ ಮಾಡಿದ್ದರು. ಹಿಗಾಗಿ ಡಿಡಿಪಿಐ ಮಲ್ಲೇಶಪ್ಪ ಶಾಲೆಗೆ ತುರ್ತು ರಜೆ ನೀಡಿದ್ದರು. ಇಂದು ಅದೇ ಶಾಲೆಗೆ ಡಿಸಿ, ಎಸ್ಪಿ, ಸಿಇಓ ಭೇಟಿ ನೀಡಿ ಮಕ್ಕಳಿಗೆ ಪಾಠ ಮಾಡಿದ್ದು ವಿಶೇಷವಾಗಿತ್ತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ