ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನವೂ ಮುಂದುವರಿದಿದೆ.
ಧರಣಿಯಲ್ಲಿ ಪಾಲ್ಗೊಳ್ಳುತ್ತಿರುವ ಹಲವು ಕಾಂಗ್ರೆಸ್ ಸದಸ್ಯರು ವಿರೋಧ ಪಕ್ಷದವರ ಮೊಗಸಾಲೆಯಲ್ಲಿ ಕ್ರಿಕೆಟ್ ಮ್ಯಾಚ್ ವೀಕ್ಷಣೆ ಮಾಡಿದ್ದಾರೆ. ಇನ್ನು ಧರಣಿ ಹಿನ್ನೆಲೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಜಯನಗರದ ಖಾಸಗಿ ಹೋಟೆಲ್ನಿಂದ ರಾತ್ರಿ ಊಟ ಬಂದಿದ್ದು, ಸ್ಪೀಕರ್ ಸಚಿವಾಲಯದಿಂದ ವೆಜ್ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.ಕಾಂಗ್ರೆಸ್ ಧರಣಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕರಿಗೆ ಬೆಡ್, ತಲೆ ದಿಂಬುಗಳು ಹಾಗೂ ಹೊದಿಕೆ ವ್ಯವಸ್ಥೆ ಮಾಡಲಾಗಿತ್ತು. ಧರಣಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಅವರು ಟ್ರಾಕ್ ಪ್ಯಾಂಟ್ ಹಾಗೂ ಟೀ ಶರ್ಟ್ ಧರಿಸಿ ಆಗಮಿಸಿದ್ದರು.