Breaking News
Home / ರಾಜಕೀಯ / ಕಾಂಗ್ರೆಸ್ ಅಹೋರಾತ್ರಿ ಧರಣಿ 2ನೇ ದಿನಕ್ಕೂ ಮುಂದುವರಿಕೆ

ಕಾಂಗ್ರೆಸ್ ಅಹೋರಾತ್ರಿ ಧರಣಿ 2ನೇ ದಿನಕ್ಕೂ ಮುಂದುವರಿಕೆ

Spread the love

ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನವೂ ಮುಂದುವರಿದಿದೆ.

ಧರಣಿಯಲ್ಲಿ ಪಾಲ್ಗೊಳ್ಳುತ್ತಿರುವ ಹಲವು ಕಾಂಗ್ರೆಸ್ ಸದಸ್ಯರು ವಿರೋಧ ಪಕ್ಷದವರ ಮೊಗಸಾಲೆಯಲ್ಲಿ ಕ್ರಿಕೆಟ್ ಮ್ಯಾಚ್ ವೀಕ್ಷಣೆ ಮಾಡಿದ್ದಾರೆ. ಇನ್ನು ಧರಣಿ ಹಿನ್ನೆಲೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಜಯನಗರದ ಖಾಸಗಿ ಹೋಟೆಲ್‍ನಿಂದ ರಾತ್ರಿ ಊಟ ಬಂದಿದ್ದು, ಸ್ಪೀಕರ್ ಸಚಿವಾಲಯದಿಂದ ವೆಜ್ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.ಕಾಂಗ್ರೆಸ್ ಧರಣಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕರಿಗೆ ಬೆಡ್, ತಲೆ ದಿಂಬುಗಳು ಹಾಗೂ ಹೊದಿಕೆ ವ್ಯವಸ್ಥೆ ಮಾಡಲಾಗಿತ್ತು. ಧರಣಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಅವರು ಟ್ರಾಕ್ ಪ್ಯಾಂಟ್ ಹಾಗೂ ಟೀ ಶರ್ಟ್ ಧರಿಸಿ ಆಗಮಿಸಿದ್ದರು. 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ