Breaking News

ಯಾರೂ ಯಾವ ಉಡುಪು ಹಾಕಿಕೊಳ್ಳಬೇಕು. ಯಾವ ಬಣ್ಣದ ಉಡುಪು ಹಾಕಬೇಕು ಅವರಿಗೆ ಬಿಟ್ಟ ವಿಚಾರ:

Spread the love

ಬೆಳಗಾವಿ: ಹಿಜಬ್ ಪರವಾಗಿ ನಮ್ಮ ನಾಯಕರು ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಹಿಜಬ್ ಪರವಾಗಿ ಕಾಂಗ್ರೆಸ್ ಪಕ್ಷ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೂ ಯಾವ ಉಡುಪು ಹಾಕಿಕೊಳ್ಳಬೇಕು. ಯಾವ ಬಣ್ಣದ ಉಡುಪು ಹಾಕಬೇಕು ಅವರಿಗೆ ಬಿಟ್ಟ ವಿಚಾರವಾಗಿದೆ. ನೀವು ಇಂತಹದ್ದೇ ಹಾಕಿಕೊಳ್ಳಿ ಅಂತಾ ಹೇಳುವ ಅಧಿಕಾರ ಯಾರಿಗೂ ಇಲ್ಲ.  ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ಗಂಭೀರವಾಗಿ ಇದೆ ಎಂದಿದ್ದಾರೆ.ಸರ್ಕಾರ ಇದರ ಬಗ್ಗೆ ಮಧ್ಯಸ್ಥಿಕೆ ವಹಿಸಬೇಕು. ಆಡಳಿತ ಮಂಡಳಿಯವರು ಮುಂದಾಗಬೇಕು. ಶಿಕ್ಷಣದ ಸಮಯದಲ್ಲಿ ಧರ್ಮ ಜಾತಿ ಜತೆಗೆ ಹೋದರೆ ಬದುಕು ಹಾಳಾಗುತ್ತದೆ. ಸರ್ಕಾರ  ಈ ವಿಚಾರವನ್ನು ಬೇಗ ಮುಗಿಸಬೇಕು. ಇಲ್ಲವಾದರೆ ಇದು  ಕೋವಿಡ್‌ ತರಹ ಹೇಗೆ ಸುಮಾರು ವರ್ಷಗಳಿಂದ ಸಮಸ್ಯೆ ಆಯ್ತು, ಹಾಗೇ ಆಗುತ್ತದೆ ಎಂದು ಹೇಳಿದ್ದಾರೆ. 


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ