Breaking News

ಸಾಲ ಪಡೆದು ಜೀಪ್​ ಕೊಡಿಸಿದ್ದ ಅಮ್ಮ..ಅದೇ ವಾಹನ ಹತ್ತಿಸಿ ತಾಯಿಯ ಕೊಂದ ಮಗ

Spread the love

ಮೈಸೂರು: ವಾಹನ​ ತೆಗೆದುಕೊಳ್ಳಲು ಕೊಡಿಸಿದ ಸಾಲದ ಕಂತು ತುಂಬುವ ವಿಚಾರಕ್ಕೆ ಜಗಳ ನಡೆದು ಮಗನೇ ತಾಯಿಯನ್ನು ಜೀಪ್​ ಹತ್ತಿಸಿ ಕೊಂದಿದ್ದಾನೆ.

ಆರೋಪಿ ಮಗನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆ (ಹನುಮಂತಪುರ) ಗ್ರಾಮದಲ್ಲಿ ಗುರುವಾರ ನಾಗಮ್ಮ (65) ಎಂಬ ಮಹಿಳೆಯನ್ನು ಆಕೆಯ ಮಗ ಹೇಮರಾಜ್(45) ಎಂಬಾತನೇ ಜೀಪ್​ ಹತ್ತಿಸಿ ಕೊಲೆ ಮಾಡಿದ್ದ. ಹಣಕಾಸು ವಿಚಾರವಾಗಿ ತಾಯಿಯನ್ನು ಜೀಪ್‌ನಿಂದ ಗುದ್ದಿ ಕೊಲೆ ಮಾಡಿದ ಪಾಪಿ ಪುತ್ರನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ