Breaking News

ಕಾಂಗ್ರೆಸ್‍ನ ಮತ ಬ್ಯಾಂಕ್, ಬಿಜೆಪಿ ಧರ್ಮಾಂಧತೆಯಿಂದ ಶಿಕ್ಷಣ ವ್ಯವಸ್ಥೆ ಹಾಳು

Spread the love

ಮೈಸೂರು: ಒಂದು ಕಡೆ ಕಾಂಗ್ರೆಸ್ ಮತ ಬ್ಯಾಂಕ್ ಲೆಕ್ಕ, ಇನ್ನೊಂದು ಕಡೆ ಬಿಜೆಪಿಯ ಕೆಲವರ ಧರ್ಮಾಂಧತೆಯಿಂದ ಶಿಕ್ಷಣ ವ್ಯವಸ್ಥೆ ಕೆಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣಕ್ಕಿಂತ ಹಿಜಬ್ ಮುಖ್ಯ ಎಂದು ಒಬ್ಬ ವಿದ್ಯಾರ್ಥಿನಿ ಹೇಳುತ್ತಾಳೆ. ವಿದ್ಯಾರ್ಥಿನಿಯನ್ನು ಆ ರೀತಿ ಮಾತಾಡುವಂತೆ ಕಾಂಗ್ರೆಸ್ ಟ್ಯೂನ್ ಮಾಡುತ್ತಿದೆ. ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್‍ಗಾಗಿ ಮನಸ್ಸು ಕೆಡಿಸುತ್ತಿದೆ. ಶಿಕ್ಷಣಕ್ಕಿಂತ ಹಿಜಬ್ ಮುಖ್ಯ ಎಂದು ಕಾಂಗ್ರೆಸ್ ಮಕ್ಕಳಿಗೆ ಹೇಳಿ ಕೊಡುತ್ತಿದೆ. ಇದು ದುರಂತವಾಗಿದೆ. ಒಟ್ಟಿನಲ್ಲಿ ಹಿಜಾಬ್ ವಿಚಾರದಿಂದ ಇಡೀ ವ್ಯವಸ್ಥೆ ಹಾಳಾಗುತ್ತಿದೆ. ಇದು ತಿಳಿಯಾಗಬೇಕು. ಕೋರ್ಟ್ ಆದೇಶ ಪಾಲನೆ ಆಗಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ