Breaking News

ಮೊಬೈಲ್ ವಿಚಾರಕ್ಕೆ ಮನೆ ಬಿಟ್ಟು ಹೋಗಿದ್ದಾತ ಶವವಾಗಿ ಪತ್ತೆ;

Spread the love

ಬಳ್ಳಾರಿ: ಮೊಬೈಲ್(Mobile Phone) ವಿಚಾರಕ್ಕೆ ಮನೆ ಬಿಟ್ಟು ಹೋಗಿದ್ದಾತ ಶವವಾಗಿ(Dead Body) ಪತ್ತೆಯಾದ ಘಟನೆ ವಿಜಯನಗರದಲ್ಲಿ(Vijayanagara) ನಡೆದಿದೆ. ಬಡತನದ(Poverty) ಬೇಗೆಯಲ್ಲಿ ಬೇಯ್ತಿದ್ದ ಪೋಷಕರು ಮೊಬೈಲ್ ಕೊಡಿಸಲಾಗದೆ ಇದ್ದೊಬ್ಬ ಮಗನ ಬೇಡಿಕೆಯನ್ನ ಈಡೇರಿಸಲಾಗದೆ ಈಗ ಕಣ್ಣೀರಲ್ಲಿ ಕೈ ತೊಳಿಯುವಂತಾಗಿದೆ. ಮಗನನ್ನ ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ವಿಜಯನಗರದ ಕೊಟ್ಟೂರಿನ ಸನ್ನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡ್ತಾ ಇದ್ದ ನಾಗರಾಜ್, ಮೊಬೈಲ್ ಕೊಡಿಸುವಂತೆ ಪೋಷಕರ ಬೆನ್ನು ಬಿದ್ದಿದ್ದ. ಮೊಬೈಲ್ ವಿಚಾರಕ್ಕೆ ಹಠ ಹಿಡಿದು ಮನೆಯನ್ನೂ ಬಿಟ್ಟಿದ್ದ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ಪೋಷಕರು, ಮಗನಿಗಾಗಿ ಹುಡುಕಾಟ ನಡೆಸಿದ್ದಾರೆ. ಆ ವೇಳೆ ಸುಟ್ಟು ಕರಕಲಾದ ನಾಗರಾಜ್ನ ಮೃತದೇಹ ಪತ್ತೆಯಾಗಿದ್ದು, ಪೋಷಕರಿಗೆ ದಿಗಿಲು ಬಡಿದಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ