ಚಂಡೀಗಢ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಇತರ ಪಕ್ಷಗಳ ವಿರುದ್ಧ ಕ್ಷುಲ್ಲಕವಾಗಿ ಆರೋಪಗಳನ್ನು ಮಾಡಿದ್ದ ಎಎಪಿ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪಂಜಾಬ್ ಮುಖ್ಯ ಚುನಾವಣಾಧಿಕಾರಿ ಅವರು ಸಾಹಿಬ್ಜಾದಾ ಅಜಿತ್ ಸಿಂಗ್ ನಗರದ ಹಿರಿಯ ಎಸ್ಪಿಗೆ ಆದೇಶ ಹೊರಡಿಸಿದ್ದಾರೆ.
ಶಿರೋಮಣಿ ಅಕಾಲಿ ದಳದ ದೂರಿನನ್ವಯ ಕೇಜ್ರಿವಾಲ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಹಾಗೂ ಇತರೆ ಪಕ್ಷಗಳ ವಿರುದ್ಧ ಕ್ಷುಲ್ಲಕವಾಗಿ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದೆ. ಶಿರೋಮಣಿ ಅಕಾಲಿ ದಳ (ಎಸ್ಎಡಿ) ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರು ಚುನಾವಣಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ದಂಡದ ಕ್ರಮಕ್ಕೆ ಕೋರಿ ಆಮ್ ಆದ್ಮಿ ಪಕ್ಷ (ಎಎಪಿ) ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನ ನಂತರ ಈ ಘಟನೆ ನಡೆದಿದೆ.