Breaking News

ಶಿವಮೊಗ್ಗ ಹತ್ಯೆ ಕೇಸ್:ಈಶ್ವರಪ್ಪ ಹೇಳಿಕೆ ಸಮರ್ಥಿಸಿಕೊಳ್ಳದ ಸಿಎಂ

Spread the love

ಬೆಂಗಳೂರು : ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ‘ಮುಸ್ಲಿಂ ಗೂಂಡಾಗಳೇ ಕಾರಣಕರ್ತರು’ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಮರ್ಥಿಸಿಕೊಳ್ಳಲು ನಿರಾಕರಿಸಿದ್ದು,’ಅವರು ಹೇಳಿದ ಮಾತ್ರಕ್ಕೆ ನಾನು ಹೇಳಬೇಕು ಅಂತಿಲ್ಲ, ತನಿಖೆ ನಡೆದ ಬಳಿಕ ಎಲ್ಲವೂ ಹೊರಗೆ ಬರಲಿದೆ’ಎಂದು ಹೇಳಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ‘ರಾತ್ರಿ ಹರ್ಷ ಅನ್ನೋ ಹುಡುಗ ಹತ್ಯೆಯಾಗಿದ್ದು, ಅವನ ಹೆಸರೇ ಹಿಂದೂ ಹರ್ಷ ಅಂತ. ಈಗಾಗಲೇ ತನಿಖೆ ನಡೆಯುತ್ತಿದೆ.ಯಾರೆಲ್ಲಾ ಭಾಗಿಯಾಗಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಕಲೆ ಹಾಕಲಾಗುತ್ತಿದೆ.ಈ ನಡುವೆ ಯಾವುದೇ ಅಹಿತ ಕರ ಘಟನೆ ನಡೆಯದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶೀಘ್ರವೇ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’ ಎಂದರು.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ