Breaking News

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್ : ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ,

Spread the love

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ ಮುಂಜಾನೆಯವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಶಿವಮೊಗ್ಗ ಎಸ್​ಪಿ ಬಿ.ಎಂ. ಲಕ್ಷ್ಮೀಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ನಗರದ ಸೀಗೆಹಟ್ಟಿ ನಿವಾಸಿ ಹರ್ಷ (24) ನ ಮೇಲೆ ಮಾರಕಾಸ್ತ್ರಗಳಿಂದ ಹತ್ಯೆಗೈದು ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. . ಹಲ್ಲೆ ನಡೆಯುತ್ತಿದ್ದಂತೆ ಎರಡು ಗುಂಪುಗಳ ನಡುವೆ ನಗರದಲ್ಲಿ ಕಲ್ಲು ತೂರಾಟ ನಡೆದಿದೆ. ಈ ವೇಳೆ ನಗರದ ದೊಡ್ಡಪೇಟೆ ಪೊಲೀಸ್‌ ಠಾಣಾ ಪೊಲೀಸರು ಲಾಠಿ ಚಾರ್ಜ್‌ ‌ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ ಮುಂಜಾನೆಯವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಶಾಲಾ ಕಾಲೇಜುಗಳಿಗೆ ಇಂದು ಡಿಸಿ ಡಾ. ಸೆಲ್ವಮಣಿ ರಜೆ ಘೋಷಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ