Breaking News

ಹಿಜಾಬ್ ವಿವಾದ ಕಾರಣಕ್ಕೆ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಗೈರಾದರೆ ಮರುಪರೀಕ್ಷೆ ಇಲ್ಲ: ಸಚಿವ ಬಿ.ಸಿ. ನಾಗೇಶ್

Spread the love

ಬೆಂಗಳೂರು: “ಹಿಜಾಬ್ ವಿವಾದದ ಕಾರಣಕ್ಕೆ ವಿದ್ಯಾರ್ಥಿಗಳು ಪಿಯು ಪರೀಕ್ಷೆಗಳಿಗೆ ಗೈರುಹಾಜರಾದರೆ ಅವರಿಗೆ ಮರುಪರೀಕ್ಷೆ ಇರುವುದಿಲ್ಲ. ಯಾರೂ ಕೂಡ ಹಠ ಮಾಡಿ ಶೈಕ್ಷಣಿಕ ಜೀವನ ಹಾಳು ಮಾಡಿಕೊಳ್ಳಬಾರದು,” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮನವಿ ಮಾಡಿದ್ದಾರೆ.

 

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ತೆಗೆದು ಪರೀಕ್ಷಾ ಕೇಂದ್ರಕ್ಕೆ ಬರಬೇಕು. “ಹಿಜಾಬ್ ವಿಚಾರದಲ್ಲಿ ಹೈಕೋರ್ಟ್‌ ನೀಡಿರುವ ಆದೇಶವನ್ನು ಕೆಲವರು ವಿರೋಧಿಸಿದ್ದಾರೆ. 

ಅಂತಹವರ ಪರವಾಗಿ ಕಾಂಗ್ರೆಸ್‌ನವರು ಮಾತನಾಡುವುದು ಸರಿಯಲ್ಲ. ವಿದ್ಯಾರ್ಥಿಗಳು ಹೈಕೋರ್ಟ್‌ ಆದೇಶ ಪಾಲಿಸಿ, ಶಾಲೆ, ಕಾಲೇಜು, ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ತೆಗೆದು ಬರಬೇಕು. ಹಿಜಾಬ್‌ಗಾಗಿ ಹಠ ಹಿಡಿದು ಕೂತರೆ ಇಡೀ ವರ್ಷದ ಶೈಕ್ಷಣಿಕ ಜೀವನ ವ್ಯರ್ಥವಾಗುತ್ತದೆ. 


Spread the love

About Laxminews 24x7

Check Also

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ. ವಿದೇಶ ಪ್ರವಾಸದಲ್ಲಿರುವ ಜನನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ