Breaking News

A.D.G.P.ಅಮರಕುಮಾರ್ ಪಾಂಡೆ ಅವರ ಸಂಧಾನಸಭೆ ಸಕ್ಸಸ್

Spread the love

ಬೆಳಗಾವಿ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನೆ ವಿವಾದ ಸಂಬಂಧಿಸಿದಂತೆ ಇಂದು ಬೆಳಗಾವಿಯಲ್ಲಿ ಎಡಿಜಿಪಿ ಅಮರಕುಮಾರ್ ಪಾಂಡೆ ಅವರು ನಡೆಸಿದ, ಸಂಧಾನಸಭೆ ಸಕ್ಸಸ್ ಆಗಿದೆ

ಎಡಿಜಿಪಿ ಅಮರಕುಮಾರ ಪಾಂಡೆ ಅವರು ನಡೆಸಿದ ಕನ್ನಡಿಗರ – ಮರಾಠಿಗ ಭಾಷಿಕ ಮುಖಂಡರ ಜೊತೆ ನಡೆದ ಸಭೆ ಸಫಲವಾಗಿದೆ.

 

 

 

 

ಪೀರನವಾಡಿಯ ಲಕ್ಷ್ಮೀ ಮಹಲ್ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರ ನಾಯಕರ ಸಭೆಯಲ್ಲಿ ಸೌಹಾರ್ದಯುತ ಸಲಹೆಗಳು ಪ್ರಸ್ತಾಪವಾಗಿ ವಿವಾದಕ್ಕೆ ಬಹುತೇಕ ತೆರೆಬಿದ್ದಿದೆ.

ರಾಯಣ್ಣ ಅಭಿಮಾನಿಗಳು ಪ್ರತಿಷ್ಠಾಪಿಸಿದ ಸ್ಥಳದಲ್ಲೇ ರಾಯಣ್ಣ ಪ್ರತಿಮೆ ಇರಲು ಮರಾಠಿ ಭಾಷಿಕರ ಒಪ್ಪಿಗೆ ಕೊಟ್ಟಿದ್ದಾರೆ. ಮೂರ್ತಿ ಪ್ರತಿಷ್ಠಾಪಿಸಿದ ವೃತ್ತಕ್ಕೆ ‘ಶಿವಾಜಿ ವೃತ್ತ’ ಎಂದು ನಾಮಕರಣಕ್ಕೆ ಕನ್ನಡಪರ ಮುಖಂಡರ ಒಪ್ಪಿಗೆ ಸೂಚಿಸಿದ್ದಾರೆ,ಎಂದು ತಿಳಿದು ಬಂದಿದ್ದು ಕನ್ನಡ ಮತ್ತು ಮರಾಠಿ ಭಾಷಿಕರ ಜೊತೆ ‌ನಡೆದ ಸಂಧಾನಸಭೆ ಸಫಲವಾಗಿದೆ.

ಡಿಸಿ ಎಂ.ಜಿ.ಹಿರೇಮಠ, ಎಡಿಜಿಪಿ ಅಮರಕುಮಾರ್ ಪಾಂಡೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪೀರನವಾಡಿ ವಿವಾದಕ್ಕೆ ಸೌಹಾರ್ದತೆಯ ತೆರೆ ಬಿದ್ದಿದೆ.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ