Breaking News

ಚಿತ್ರರಂಗದ ಮಂದಿ ಡ್ರಗ್ಸ್ ಮಾಫಿಯಾದಲ್ಲಿ ಸಿಲುಕಿದೆ:ಇಂದ್ರಜಿತ್ ಲಂಕೇಶ್

Spread the love

ಬೆಂಗಳೂರು: ಪೊಲೀಸ್ ಇಲಾಖೆ ನ್ಯಾಯ ಕೊಡಬೇಕು. ಚಿತ್ರರಂಗ ಸ್ವಚ್ಛ ಆಗಬೇಕು ಅನ್ನೊದು ನನ್ನ ಉದ್ದೇಶ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿಕೆಗೆ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ.

ಮಾತನಾಡಿದ ಇಂದ್ರಜಿತ್ ಲಂಕೇಶ್, ಪೊಲೀಸ್ ಕಮಿಷನರ್ ಅವರ ತನಿಖೆಗೆ ಸಹಕರಿಸುತ್ತೀನಿ, ಭದ್ರತೆ ಕೊಡುತ್ತೀನಿ ಅಂತ ಹೇಳಿರೋದು ಸಂತೋಷ. ಆದರೆ ಪೊಲೀಸ್ ಇಲಾಖೆ ಚಿತ್ರರಂಗಕ್ಕೆ ನ್ಯಾಯ ಕೊಡಬೇಕು ಎಂದು ಕಮಲ್ ಪಂತ್ ಅವರ ಹೇಳಿಕೆಯನ್ನು ಸ್ವಾಗತಿಸಿದ್ದಾರೆ.

ಅಲ್ಲದೇ ಚಿತ್ರರಂಗ ಸ್ವಚ್ಛ ಆಗಬೇಕು ಅನ್ನೋದು ನನ್ನ ಉದ್ದೇಶ. ಚಿತ್ರರಂಗಕ್ಕೆ ನನ್ನಿಂದ ಯಾವುದೇ ಧಕ್ಕೆ ಆಗಲ್ಲ. ಚಿತ್ರರಂಗದ ಮಂದಿ ಡ್ರಗ್ಸ್ ಮಾಫಿಯಾದಲ್ಲಿ ಸಿಲುಕಿದೆ ಅಂದಾಗ ಫಿಲಂ ಚೇಂಬರ್ ಮಾತನಾಡಬೇಕಿತ್ತು. ಈ ಹಿಂದೆ ಹನಿಟ್ರಾಪ್ ಆರೋಪ್ ಕೇಳಿ ಬಂದಿತ್ತು. ಆಗಲೂ ಫಿಲಂ ಚೇಂಬರ್ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.


Spread the love

About Laxminews 24x7

Check Also

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Spread the loveಬೆಂಗಳೂರು: ಡಿ.ಕೆ.ಶಿವಕುಮಾರ್  ಕೆಪಿಸಿಸಿ ಅಧ್ಯಕ್ಷರಾಗಿ ಇಂದಿಗೆ 6 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಪಕ್ಷದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ