Breaking News

A.C.B. ಬಲೆಗೆ ಬಿದ್ದ ಆಯುಷ್ ಅಧಿಕಾರಿ ಜೈಲಿಗೆ

Spread the love

ಧಾರವಾಡ: ಆರ್‌ ಎಂ ಪಿ ವೈದ್ಯನಿಂದ ಹಣ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಆಯುಷ್ ಅಧಿಕಾರಿ ಜೈಲು ಪಾಲಾಗಿದ್ದಾರೆ.

ಆರ್‍ಜಿ ಮೇತ್ರಿ ಎಸಿಬಿ ಬಲೆಗೆ ಬಿದ್ದವರು. ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಆರ್‍ಎಂಪಿ ವೈದ್ಯ ಹರಿಶ್ಚಂದ್ರ ನಾರಾಯಣಪುರಗೆ ಈ ಆಯುಷ್ ಅಧಿಕಾರಿ 20 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ವ್ಯಕ್ತವಾಗಿದೆ. 

ಆಸ್ಪತ್ರೆ ನಡೆಸಲು ಯಾವುದೇ ಸಮಸ್ಯೆ ಮಾಡುವುದಿಲ್ಲ ಎಂದು ಹೇಳಿದ್ದ ವೈದ್ಯ ಅಧಿಕಾರಿ ಮೇತ್ರಿ, ಮುಂಗಡವಾಗಿ 10 ಸಾವಿರ ರೂ. ಪಡೆದಿದ್ದರು. ಧಾರವಾಡದಲ್ಲಿ 10 ಸಾವಿರ ಪಡೆಯುವಾಗ ಎಸಿಬಿ ದಾಳಿ ಮಾಡಿತ್ತು. ಸದ್ಯ ಎಸಿಬಿ ಅಧಿಕಾರಿಗಳು ಆಯುಷ್ ಅಧಿಕಾರಿಗೆ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಅವನಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. 


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ