Breaking News

A.C.B. ಬಲೆಗೆ ಬಿದ್ದ ಆಯುಷ್ ಅಧಿಕಾರಿ ಜೈಲಿಗೆ

Spread the love

ಧಾರವಾಡ: ಆರ್‌ ಎಂ ಪಿ ವೈದ್ಯನಿಂದ ಹಣ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಆಯುಷ್ ಅಧಿಕಾರಿ ಜೈಲು ಪಾಲಾಗಿದ್ದಾರೆ.

ಆರ್‍ಜಿ ಮೇತ್ರಿ ಎಸಿಬಿ ಬಲೆಗೆ ಬಿದ್ದವರು. ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಆರ್‍ಎಂಪಿ ವೈದ್ಯ ಹರಿಶ್ಚಂದ್ರ ನಾರಾಯಣಪುರಗೆ ಈ ಆಯುಷ್ ಅಧಿಕಾರಿ 20 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ವ್ಯಕ್ತವಾಗಿದೆ. 

ಆಸ್ಪತ್ರೆ ನಡೆಸಲು ಯಾವುದೇ ಸಮಸ್ಯೆ ಮಾಡುವುದಿಲ್ಲ ಎಂದು ಹೇಳಿದ್ದ ವೈದ್ಯ ಅಧಿಕಾರಿ ಮೇತ್ರಿ, ಮುಂಗಡವಾಗಿ 10 ಸಾವಿರ ರೂ. ಪಡೆದಿದ್ದರು. ಧಾರವಾಡದಲ್ಲಿ 10 ಸಾವಿರ ಪಡೆಯುವಾಗ ಎಸಿಬಿ ದಾಳಿ ಮಾಡಿತ್ತು. ಸದ್ಯ ಎಸಿಬಿ ಅಧಿಕಾರಿಗಳು ಆಯುಷ್ ಅಧಿಕಾರಿಗೆ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಅವನಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. 


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ