Breaking News

ನಾಲ್ಕು ವರ್ಷದಿಂದ ಕೂತಲ್ಲೇ ಕೂತಿದ್ದಾರೆ. ಹೀಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ :ಲಕ್ಷ್ಮಣ ಸವದಿ

Spread the love

ಕೊಪ್ಪಳ: ಕಾಂಗ್ರೆಸ್‍ನವರಿಗೆ ಕೆಲಸದ ಕೊರತೆ ಇದೆ, ಹಾಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರು ನೀರಾವರಿ ಮಂತ್ರಿಯಾಗಿದ್ದಾಗ ಕೆಲಸ ಮಾಡಲಿಲ್ಲ. ಈಗ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ ಅವರು, ಮಹಾದಾಯಿ ವಿಚಾರದ ಬಗ್ಗೆ ಕಾಂಗ್ರೆಸ್‍ನವರು ನಮಗೆ ಹೇಳುವ ಅವಶ್ಯಕತೆಯಿಲ್ಲ. ಮಹಾದಾಯಿ ನಮ್ಮ ಬದ್ಧತೆಯಾಗಿದೆ. ಅದಕ್ಕಾಗಿ ನಾವು ಮಹಾದಾಯಿ ಕೆಲಸ ಮಾಡೇ ಮಾಡುತ್ತೇವೆ ಎಂದರು.

ಕಾಂಗ್ರೆಸ್‍ನವರಿಗೆ ಸ್ವಲ್ಪ ಬಿಪಿ, ಶುಗರ್ ಜಾಸ್ತಿಯಾಗಿದೆ. ನಾಲ್ಕು ವರ್ಷದಿಂದ ಕೂತಲ್ಲೇ ಕೂತಿದ್ದಾರೆ. ಹೀಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. 


Spread the love

About Laxminews 24x7

Check Also

ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..!

Spread the loveಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ