Breaking News

KPSC ನೇಮಕಾತಿ: ಕಲ್ಯಾಣ ಕರ್ನಾಟಕದ 59 ಸೇರಿ 188 ಎಂಜಿನಿಯರ್ ಹುದ್ದೆಗೆ ಇಂದಿನಿಂದ ಅರ್ಜಿ ಸಲ್ಲಿಕೆ

Spread the love

ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 188 ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲಾಗುತ್ತದೆ.

ಕರ್ನಾಟಕ ಲೋಕಸೇವಾ ಆಯೋಗ ಫೆಬ್ರವರಿ 21 ರಂದು ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ.

ಉಳಿಕೆ ಮೂಲ ವೃಂದ 129, ಕಲ್ಯಾಣ ಕರ್ನಾಟಕಕ್ಕೆ ಮೀಸಲಾದ 59 ಹುದ್ದೆಗಳು ಸೇರಿದಂತೆ ಒಟ್ಟು 188 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು.

ಮಾರ್ಚ್ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಾರ್ಚ್ 31 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ಮತ್ತು ಹೆಚ್ಚಿನ ಮಾಹಿತಿಗಾಗಿ https://kpsc.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ