Breaking News

ಉಕ್ರೇನ್‍ನಲ್ಲಿರುವ ಮಗಳಿಂದ ವಾಯ್ಸ್ ಮೆಸೇಜ್- ಪೋಷಕರಲ್ಲಿ ಆತಂಕ

Spread the love

ಬಾಗಲಕೋಟೆ: ರಷ್ಯಾದಾಳಿಯ ಬೆನ್ನಲ್ಲೆ ಇಡೀ ಉಕ್ರೇನ್ ದೇಶ ಸ್ಮಶಾನದಂತೆ ಆವರಿಸಿದೆ. ಇತ್ತ ವ್ಯಾಸಂಗಕ್ಕಾಗಿ ಉಕ್ರೇನ್‍ಗೆ ತೆರಳಿದ ಭಾರತೀಯ ಮೂಲದ ವಿದ್ಯಾರ್ಥಿಗಳ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಬಾಗಲಕೋಟೆ ಜಿಲ್ಲೆಯಿಂದ ಸುಮಾರು 23 ವಿದ್ಯಾರ್ಥಿಗಳು ರಕ್ಷಣೆಗಾಗಿ ಪರದಾಟ ನಡೆಸುತ್ತಿದ್ದಾರೆ.

ಬಾಗಲಕೋಟೆ ನಿವಾಸಿಯಾಗಿರುವ ಅಪೂರ್ವ ಕದಾಂಪುರ ಪ್ರಥಮ ವರ್ಷದ ಎಂ.ಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ. ಅವರ ಫೋನ್ ಸಂಪರ್ಕ ಬಂದ್ ಆಗಿದೆ. ಅಲ್ಲದೇ ಅಪೂರ್ವ ಅವರ ಪೋಷಕರಿಗೆ ಕಳುಹಿಸಿದ ವಾಯ್ಸ್ ಮೆಸೇಜ್ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ವಾಯ್ಸ್ ಮಸೇಜ್‍ನಲ್ಲಿ ಏನಿದೆ?: ನಾನು ಇರುವ ಬಂಕರ್ ಪಕ್ಕವೇ ಬಾಂಬ್ ಬ್ಲಾಸ್ಟಿಂಗ್ ಆಗುತ್ತಿದೆ. ಹೀಗಾಗಿ ನಾವು ಬಂಕರ್ ಒಳಗೆ ಹೋಗುತ್ತಿದ್ದೇವೆ. ನಮ್ಮನ್ನು ಟ್ರ್ಯಾಕ್ ಮಾಡಬಾರದು ಎಂದು ಮೊಬೈಲ್ ಸ್ವೀಚ್ ಆಫ್ ಮಾಡುತ್ತಿದ್ದೇವೆ. ನನ್ನ ಮೊಬೈಲ್ ಫ್ಲೈಟ್ ಮೋಡ್‌ನಲ್ಲಿರುತ್ತದೆ. ಮತ್ತೆ ನಾನು ಮೆಸೇಜ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಮಗಳ ಈ ಮೆಸೇಜ್ ಪೋಷಕರಲ್ಲಿ ಆತಂಕ ಮನೆ ಮಾಡಿದೆ.


Spread the love

About Laxminews 24x7

Check Also

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

Spread the love : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ