ಬೆಂಗಳೂರು: ಬೆಂಗಳೂರಿನ ನೆಲಮಂಗಲ ರೈಲ್ವೇ ನಿಲ್ದಾಣದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ ಆನ್ ರೋಲ್ ಆಫ್ ರೈಲು ಸೇವೆಗೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಕಂದಾಯ ಸಚಿವ ಆರ್.ಅಶೋಕ್, ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರ್ ಗೌಡ ಪಾಟೀಲ್, ಶಾಸಕ ನಾರಾಯಣಸ್ವಾಮಿ ಇತರರು ಇದ್ದರು.