Breaking News

i phone ‘ಆಪಲ್’ ಕಂಪನಿಗೆ ಬುದ್ಧಿ ಕಲಿಸಿದ ಚಿಕ್ಕಮಗಳೂರಿನ ಯುವಕ!

Spread the love

ಬೆಂಗಳೂರು, ಮಾ. 04: ವಾರಂಟಿ ಅವಧಿಯಲ್ಲಿ ಕೆಟ್ಟು ಹೋಗಿದ್ದ ಐಪೋನ್ ರಿಪೇರಿ ಮಾಡಲು ನಿರಾಕರಿಸಿದ ಐಪೋನ್ ಕಂಪನಿಗೆ ಚಿಕ್ಕಮಗಳೂರಿನ ಯುವಕ ಸರಿಯಾಗಿ ಬುದ್ಧಿ ಕಲಿಸಿದ್ದಾನೆ.

ವಾರಂಟಿ ಅವಧಿ ಇದ್ದರೂ ಪೋನ್ ನನ್ನು ರಿಪೇರಿ ಮಾಡಿಕೊಡದೇ ಆಪಲ್ ಐಪೋನ್ ವಿರುದ್ಧ ಗ್ರಾಹಕ ವೇದಿಕೆ ನ್ಯಾಯಾಲಯದ ಮೊರೆ ಹೋಗಿ ಚಿಕ್ಕಮಗಳೂರಿನ ಯುವಕ ಜಯ ಗಳಿಸಿದ್ದಾರೆ.

ಅರ್ಜಿದಾರನ ವಾದ ಆಲಿಸಿದ ನ್ಯಾಯಾಲಯ, ವಾರಂಟಿ ಅವಧಿ ಇದ್ದರೂ ಐಪೋನ್ ರಿಪೇರಿ ಮಾಡದ ಆಪಲ್ ಇಂಡಿಯಾ ಸಂಸ್ಥೆಯು, ಯುವಕನಿಗೆ ಹೊಸ ಪೋನ್ ಕೊಡಬೇಕು, ಇಲ್ಲವೇ ಅದರ ಪೂರ್ಣ ಮೊತ್ತವನ್ನು ವಾಪಸು ನೀಡಬೇಕು ಎಂದು ಗ್ರಾಹಕ ವೇದಿಕೆ ನ್ಯಾಯಾಲಯ ಆದೇಶ ಮಾಡಿದೆ. ಜತೆಗೆ ಹತ್ತು ಸಾವಿರ ರೂ. ಪರಿಹಾರವನ್ನು ಕೊಡುವಂತೆ ಆದೇಶ ಮಾಡಿದೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ