Breaking News

ವ್ಯಾಸಂಗ ಮುಂದುವರೆಸಲು ಭಾರತದಲ್ಲಿ ಅವಕಾಶ ಕೊಡಿ’

Spread the love

ಬೆಳಗಾವಿ: ಯುದ್ಧಪೀಡಿತ ಉಕ್ರೇನಿನಿಂದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ವೈದ್ಯಕೀಯ ವಿದ್ಯಾರ್ಥಿ ಸುರಕ್ಷಿತವಾಗಿ ಮನೆಗೆ ತಲುಪಿದ್ದಾರೆ.ಬೈಲಹೊಂಗಲ ಪಟ್ಟಣದ ಪ್ರಜ್ವಲ್ ತಿಪ್ಪಣ್ಣವರ ಉಕ್ರೇನಿನ ಟೆರ್ನೋಪಿಲ್ ನ್ಯಾಶನಲ್ ಮೆಡಿಕಲ್ ಕಾಲೇಜಿನಲ್ಲಿ ನಾಲ್ಕನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಟೆರ್ನೋಪಿಲ್​ನಿಂದ ಮುಂಬೈ ಮಾರ್ಗವಾಗಿ ಪ್ರಜ್ವಲ್ ಬೆಳಗಾವಿಗೆ ಆಗಮಿಸಿದ್ದಾರೆ.ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಜ್ವಲ್ ತಿಪ್ಪಣ್ಣವರ, ಬೆಳಗಾವಿ ಜಿಲ್ಲೆಯ 19 ವಿದ್ಯಾರ್ಥಿಗಳು ಉಕ್ರೇನಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲರಿಗೂ ಇಲ್ಲೇ ವ್ಯಾಸಂಗಕ್ಕೆ ಅವಕಾಶ ಮಾಡಿಕೊಡಬೇಕು. ಉಕ್ರೇನ್​ನಲ್ಲಿ ಶಿಕ್ಷಣಕ್ಕೆ ನೀಡುತ್ತಿದ್ದ ಶುಲ್ಕವನ್ನೇ ಸರ್ಕಾರ ನಿಗದಿಪಡಿಸಿದರೆ ಅನುಕೂಲವಾಗುತ್ತದೆ ಎಂದು ವಿನಂತಿಸಿದರು.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ