Breaking News

ಮೀನು ವ್ಯಾಪಾರಿಗೆ ತಲವಾರು ತೋರಿಸಿ 2 ಲಕ್ಷ ರೂ. ದೋಚಿ ಪರಾರಿಯಾದ ಮೂವರು

Spread the love

ಉಳ್ಳಾಲ: ಟೆಂಪೋ ಅಡ್ಡಗಟ್ಟಿ ಮೀನು ವ್ಯಾಪಾರಿಯೊಬ್ಬರ ಮೇಲೆ ಮಾರಕಾಯುಧಗಳಿಂದ ದಾಳಿ ನಡೆಸಿ 2 ಲಕ್ಷ ರೂ. ನಗದು ದೋಚಿಕೊಂಡು ಮೂವರು ಮುಸುಕುಧಾರಿಗಳು ಪರಾರಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ನೇತ್ರಾವತಿ ಸೇತುವೆ ಸಮೀಪ ಇಂದು ನಸುಕಿನ ಜಾವ ನಡೆದಿದೆ.

ಉಳ್ಳಾಲದ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ಹಲ್ಲೆಗೊಳಗಾದವರು. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಸಮೀಪ ಮೀನು ಮಾರಾಟ ಮಾಡುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ಕೆಂಪು ಬಣ್ಣದ ಕಾರಿನಲ್ಲಿ ಬಂದ ತಂಡವೊಂದು, ಮುಸ್ತಾಫ ಅವರ ಟೆಂಪೋ ಹಿಂಬಾಲಿಸಿ ನೇತ್ರಾವತಿ ಸೇತುವೆ ಸಮೀಪ ಅಡ್ಡಗಟ್ಟಿದೆ.

ಬಳಿಕ ಮುಸ್ತಾಫ ಅವರು ಟೆಂಪೋದಿಂದ ಕೆಳಗಿಳಿಯುತ್ತಿದ್ದಂತೆ ಕಾರಿನಲ್ಲಿದ್ದ ಮೂವರಲ್ಲಿ, ಇಬ್ಬರು ಮುಸುಕುಧಾರಿಗಳು ತಲವಾರಿನಿಂದ ವ್ಯಾಪಾರಿ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೇ ಟೆಂಪೋದಲ್ಲಿಟ್ಟ 2 ಲಕ್ಷ ರೂ. ನಗದನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ