ಬೆಂಗಳೂರು: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖರಕಾಯ್, ಕೀವ್ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರು ಕಾರ್ಯನಿರತರಾಗಿದ್ದಾರೆ ಅಂತ ಹೇಳಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ ಎಂದರು.
Laxmi News 24×7